ಮೈಸೂರು : ದಸರಾ ಪೂರ್ವಭಾವಿ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಿಂದ ಸರಳವೂ ಅಲ್ಲ, ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆಗೆ ಮುಂದಾದೆವು. ಈ ಮೂಲಕ ಎಲ್ಲರ ಸಹಕಾರದಿಂದ ದಸರಾ ಮಹೋತ್ಸವ ಯಶಸ್ವಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಹೇಳಿದ್ದಾರೆ.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ನೆರವೇರಿದೆ. ಮೈಸೂರು ದಸರಾ ವಿಶ್ವ ವಿಖ್ಯಾತಿ ಪಡೆದಿರುವುದರಿಂದ 10 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಇಷ್ಟು ಜನ ಆಗಮಿಸಿದ್ದರು ಸಹ ಯಾವುದೇ ಅಹಿತಕರ ಘಟನೆ ನಡೆಯದೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಎಲ್ಲರ ಸಹಕಾರದಿಂದ ಸಾಂಪ್ರದಾಯಿಕ ದಸರಾವನ್ನು ಜನ ಬಹಳ ಸಂಭ್ರಮದಿಂದ ಆಚರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಮಹಿಷ ದಸರಾಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದೆ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನದ ಪೀಠಿಕೆ ಓದಿದರೆ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗುತ್ತದೆ. ಸಂವಿಧಾನ ಬಗ್ಗೆ ತಿಳಿದವರು ಯಾರು ಈ ರೀತಿ ಮಾತನಾಡಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಸಿಎಂ ಹುದ್ದೆ ವಿಚಾರವಾಗಿ ಸ್ಪಷ್ಟನೆ ನೀಡಿದ ಮಹದೇವಪ್ಪ, ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಸರ್ಕಾರದಲ್ಲಿ ಮುಖ್ಯಮಂತ್ರಿ ಇದ್ದಾಗ ಆ ಹುದ್ದೆಯ ಬಗ್ಗೆ ಚರ್ಚೆ ಅನಗತ್ಯ. ಖಾಲಿ ಇಲ್ಲದ ಹುದ್ದೆಯ ಬಗ್ಗೆ ಚರ್ಚೆ ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಪರಮೇಶ್ವರ್ ಮನೆಯಲ್ಲಿ ಊಟ ಬಿಟ್ಟು ಬೇರೇನೂ ಚರ್ಚೆ ಮಾಡಿಲ್ಲ. ಓನ್ಲಿ ಮುದ್ದೆ, ನೋ ಹುದ್ದೆ. ಪರಮೇಶ್ವರ್ ಊಟಕ್ಕೆ ಕರೆದಿದ್ದರು. ಡಿನ್ನರ್ ಕೂಟಕ್ಕೆ ರಾಜಕೀಯ ವ್ಯಾಖ್ಯಾನ ಸರಿಯಲ್ಲ ಎಂದಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…