ಮೈಸೂರು

ಜಿಎಸ್‌ಟಿ ಜಾರಿ ಮಾಡಿ, ಹೆಚ್ಚೆಚ್ಚು ವಸೂಲಿ ಮಾಡಿದವರೇ ಈಗ ಬೆನ್ನು ತಟ್ಟಿಕೊಳ್ತಿದ್ದಾರೆ : ಸಿ.ಎಂ ವ್ಯಂಗ್ಯ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಇದನ್ನು ಓದಿ: ನನ್ನ ಹೆಸರಲ್ಲೇ ಶಿವ ರಾಮ ಇದ್ದಾರೆ : ಸಿಎಂ ಸಿದ್ದರಾಮಯ್ಯ

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು : ಸಿ.ಎಂ
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

1 hour ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

2 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

3 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

4 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

4 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

4 hours ago