ಮೈಸೂರು: ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್ ನಂಬರ್.51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್ ಓವನ್ ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.
ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.
ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…