ಮೈಸೂರು: ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್ ನಂಬರ್.51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್ ಓವನ್ ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.
ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.
ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…