ಮೈಸೂರು: ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್ ನಂಬರ್.51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್ ಓವನ್ ಪ್ರಿಂಟ್ ಬ್ಯಾಗ್ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.
ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.
ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…