ಮೈಸೂರು

ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡ ಮೈಸೂರು ಮಹಾನಗರ ಪಾಲಿಕೆ

ಮೈಸೂರು: ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್‌ ನಂಬರ್.‌51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್‌ ಓವನ್‌ ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್‌ ಉರ್‌ ರೆಹಮಾನ್‌ ಷರೀಫ್‌, ಸಹಾಯಕ ಆಯುಕ್ತ ಮಂಜುನಾಥ್‌ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್‌, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್‌, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.

ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್‌ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.

ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago