ಮೈಸೂರು

ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡ ಮೈಸೂರು ಮಹಾನಗರ ಪಾಲಿಕೆ

ಮೈಸೂರು: ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್‌ ನಂಬರ್.‌51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್‌ ಓವನ್‌ ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್‌ ಉರ್‌ ರೆಹಮಾನ್‌ ಷರೀಫ್‌, ಸಹಾಯಕ ಆಯುಕ್ತ ಮಂಜುನಾಥ್‌ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್‌, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್‌, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.

ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್‌ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.

ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

6 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

10 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

11 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago