ಮೈಸೂರು

ಲಿಂಗಾಂಬುದಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಮೈಸೂರು : ಬೆಂಗಳೂರಿನ ಉಳ್ಳಾಲು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ ಬೆನ್ನಿಗೇ ಸಾಂಸ್ಕತಿಕ ನಗರಿಯ ಲಿಂಗಾಬುದಿ ಕೆರೆ ನೀರು ಕಲುಷಿತಗೊಂಡು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ನಡೆದಿದೆ.

ಕೆರೆಯಲ್ಲಿದ್ದ ಮೀನುಗಳು ಏಕಾಏಕಿ ಸಾವನ್ನಪ್ಪಿದ್ದು ಕೆರೆ ನೀರು ಕಲುಷಿತಗೊಂಡಿದ್ದರಿಂದಲೇ ಮೀನುಗಳು ಸಾವನ್ನಪ್ಪಿವೆಯೋ ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನಪ್ಪಿದ್ದಾವೋ ಎನ್ನುವುದು ಇನ್ನೂ ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ. ನೀರು ಕಡಿಮೆಯಾಗಿರುವದರಿಂದ ಆಮ್ಲಜನಕ ಕೊರತೆ ಮತ್ತು ನೀರು ಕಲುಷಿತಗೊಂಡ ಕಾರಣ ಮೀನುಗಳು ಸತ್ತಿರಬಹುದು ಎನ್ನಲಾಗಿದೆ. ಸಾವಿರಾರು ಮೀನುಗಳು ಸತ್ತ ಕಾರಣ ಸುತ್ತಮುತ್ತ ಭಾರೀ ದುರ್ನಾತ ಬೀರುತ್ತಿದೆ.

ಆಮ್ಲಜನಕ ಕೊರತೆ ಕಾರಣ : ಸುಮಾರು 50 ಹೆಕ್ಟೇರ್ ವಿಸ್ತೀರ್ಣದ ಕೆರೆಯಲ್ಲಿ ಹಲವು ವರ್ಷಗಳಿಂದ ಮೀನುಗಾರಿಕೆ ನಡೆಯುತ್ತಿದೆ. ಅಗತ್ಯಕ್ಕಿಂತ ಹೆಚ್ಚು ಮೀನುಗಳ ಸಾಕಣೆ, ಶುಚಿತ್ವದ ಕೊರತೆ ಮೀನುಗಳ ಸಾವಿಗೆ ಕಾರಣ ಎಂದು ಸ್ಥಳೀಯರು ನಾನಾ ರೀತಿಯ ಕಾರಣಗಳನ್ನು ಹೇಳುತ್ತಿದ್ದಾರೆ. ಇನ್ನೂ ಕೆಲವರು, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ಏರಿಕೆಯಾಗಿರುವುದು ಮೀನುಗಳು ಸಾಯಲು ಕಾರಣವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೀನುಗಳಿಗೆ ಆಮ್ಲಜನಕ ಎಷ್ಟು ಬೇಕು : ಮೀನುಗಳು ಬದುಕಲು ಪ್ರತೀ ಲೀಟರ್ ನೀರಿನಲ್ಲಿ ಕನಿಷ್ಠ 4 ಮಿಲಿ ಗ್ರಾಂ ಹಾಗೂ ಗರಿಷ್ಠ 6.5 ಮಿಲಿ ಗ್ರಾಂ ಆಮ್ಲಜನಕ ಇರಬೇಕು. ಸದ್ಯ ಕೆರೆಯಲ್ಲಿ ಇದರ ಪ್ರಮಾಣ ಕಡಿಮೆಯಿರುವ ಸಾಧ್ಯತೆಯಿದೆ. ಹಾಗೆಯೇ ಹೆಚ್ಚಿನ ಕ್ಲೋರಿನ್ ಪ್ರಮಾಣ ಕಂಡು ಬಂದಿದ್ದರೆ ಆಗಲೂ ಮೀನುಗಳು ಸಾಯುತ್ತವೆ. ಈ ಬಗ್ಗೆ ಪರೀಕ್ಷೆ ನಡೆಸಬೇಕು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಮೃತಪಟ್ಟಿರುವ ಮೀನುಗಳ ಹೊರತೆಗೆಯುವಿಕೆ : ಮೀನುಗಳ ಮಾರಣ ಹೋಮದ ಜತೆಗೆ ಕೆರೆ ನೀರು ವಿಷವಾಗಿ ಪರಿವರ್ತನೆಯಾಗಿದೆ. ನೀರಿನಲ್ಲಿ ಮೃತಪಟ್ಟಿರುವ ಸಾವಿರಾರು ಮೀನುಗಳು ನೀರಿನಲ್ಲಿ ಕೊಳೆತು ಕೆರೆಯ ನೀರು ಮತ್ತಷ್ಟು ವಿಷವಾಗುವ ಸಾಧ್ಯತೆ ಇದೆ ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳನ್ನೊಳಗೊಂ ಡಂತೆ ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಕಲುಷಿತ ನೀರಿನ ಸಮಸ್ಯೆ : ಹಿಂದಿನಿಂದಲೂ ಕೆರೆಗೆ ಕಲುಷಿತ ನೀರು ಹರಿದು ಬರುತ್ತಿದ್ದು ಇದನ್ನು ತಡೆಯುವ ಪ್ರಯತ್ನ ಇದುವರೆಗೆ ಯಶಸ್ವಿಯಾಗಿಲ್ಲ. ನಾನಾ ಬಡಾವಣೆಗಳ ಒಳಚರಂಡಿ ನೀರೂ ಕೆರೆ ಸೇರುತ್ತಿದೆ ಎಂಬ ಆರೋಪಗಳಿವೆ. ಸ್ಥಳೀಯ ನಿವಾಸಿಗಳು, ಬೆಳಿಗ್ಗೆ ವಾಕಿಂಗ್‌ ಬರುವವರು ಹಲವು ಸಲ ಈ ಸಂಬಂಧ ಹೋರಾಟ ನಡೆಸಿದ್ದಾರೆ. ಆದರೆ ಕಲುಷಿತ ನೀರು ತಡೆಗೆ ಕಾಯಂ ಪ್ರಯತ್ನ ನಡೆದಿಲ್ಲ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago