ಮೈಸೂರು

ಲಿಂಗಾಂಬುದಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಮೈಸೂರು : ಬೆಂಗಳೂರಿನ ಉಳ್ಳಾಲು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ ಬೆನ್ನಿಗೇ ಸಾಂಸ್ಕತಿಕ ನಗರಿಯ ಲಿಂಗಾಬುದಿ ಕೆರೆ ನೀರು ಕಲುಷಿತಗೊಂಡು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ನಡೆದಿದೆ.

ಕೆರೆಯಲ್ಲಿದ್ದ ಮೀನುಗಳು ಏಕಾಏಕಿ ಸಾವನ್ನಪ್ಪಿದ್ದು ಕೆರೆ ನೀರು ಕಲುಷಿತಗೊಂಡಿದ್ದರಿಂದಲೇ ಮೀನುಗಳು ಸಾವನ್ನಪ್ಪಿವೆಯೋ ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನಪ್ಪಿದ್ದಾವೋ ಎನ್ನುವುದು ಇನ್ನೂ ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ. ನೀರು ಕಡಿಮೆಯಾಗಿರುವದರಿಂದ ಆಮ್ಲಜನಕ ಕೊರತೆ ಮತ್ತು ನೀರು ಕಲುಷಿತಗೊಂಡ ಕಾರಣ ಮೀನುಗಳು ಸತ್ತಿರಬಹುದು ಎನ್ನಲಾಗಿದೆ. ಸಾವಿರಾರು ಮೀನುಗಳು ಸತ್ತ ಕಾರಣ ಸುತ್ತಮುತ್ತ ಭಾರೀ ದುರ್ನಾತ ಬೀರುತ್ತಿದೆ.

ಆಮ್ಲಜನಕ ಕೊರತೆ ಕಾರಣ : ಸುಮಾರು 50 ಹೆಕ್ಟೇರ್ ವಿಸ್ತೀರ್ಣದ ಕೆರೆಯಲ್ಲಿ ಹಲವು ವರ್ಷಗಳಿಂದ ಮೀನುಗಾರಿಕೆ ನಡೆಯುತ್ತಿದೆ. ಅಗತ್ಯಕ್ಕಿಂತ ಹೆಚ್ಚು ಮೀನುಗಳ ಸಾಕಣೆ, ಶುಚಿತ್ವದ ಕೊರತೆ ಮೀನುಗಳ ಸಾವಿಗೆ ಕಾರಣ ಎಂದು ಸ್ಥಳೀಯರು ನಾನಾ ರೀತಿಯ ಕಾರಣಗಳನ್ನು ಹೇಳುತ್ತಿದ್ದಾರೆ. ಇನ್ನೂ ಕೆಲವರು, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ಏರಿಕೆಯಾಗಿರುವುದು ಮೀನುಗಳು ಸಾಯಲು ಕಾರಣವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೀನುಗಳಿಗೆ ಆಮ್ಲಜನಕ ಎಷ್ಟು ಬೇಕು : ಮೀನುಗಳು ಬದುಕಲು ಪ್ರತೀ ಲೀಟರ್ ನೀರಿನಲ್ಲಿ ಕನಿಷ್ಠ 4 ಮಿಲಿ ಗ್ರಾಂ ಹಾಗೂ ಗರಿಷ್ಠ 6.5 ಮಿಲಿ ಗ್ರಾಂ ಆಮ್ಲಜನಕ ಇರಬೇಕು. ಸದ್ಯ ಕೆರೆಯಲ್ಲಿ ಇದರ ಪ್ರಮಾಣ ಕಡಿಮೆಯಿರುವ ಸಾಧ್ಯತೆಯಿದೆ. ಹಾಗೆಯೇ ಹೆಚ್ಚಿನ ಕ್ಲೋರಿನ್ ಪ್ರಮಾಣ ಕಂಡು ಬಂದಿದ್ದರೆ ಆಗಲೂ ಮೀನುಗಳು ಸಾಯುತ್ತವೆ. ಈ ಬಗ್ಗೆ ಪರೀಕ್ಷೆ ನಡೆಸಬೇಕು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಮೃತಪಟ್ಟಿರುವ ಮೀನುಗಳ ಹೊರತೆಗೆಯುವಿಕೆ : ಮೀನುಗಳ ಮಾರಣ ಹೋಮದ ಜತೆಗೆ ಕೆರೆ ನೀರು ವಿಷವಾಗಿ ಪರಿವರ್ತನೆಯಾಗಿದೆ. ನೀರಿನಲ್ಲಿ ಮೃತಪಟ್ಟಿರುವ ಸಾವಿರಾರು ಮೀನುಗಳು ನೀರಿನಲ್ಲಿ ಕೊಳೆತು ಕೆರೆಯ ನೀರು ಮತ್ತಷ್ಟು ವಿಷವಾಗುವ ಸಾಧ್ಯತೆ ಇದೆ ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳನ್ನೊಳಗೊಂ ಡಂತೆ ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಕಲುಷಿತ ನೀರಿನ ಸಮಸ್ಯೆ : ಹಿಂದಿನಿಂದಲೂ ಕೆರೆಗೆ ಕಲುಷಿತ ನೀರು ಹರಿದು ಬರುತ್ತಿದ್ದು ಇದನ್ನು ತಡೆಯುವ ಪ್ರಯತ್ನ ಇದುವರೆಗೆ ಯಶಸ್ವಿಯಾಗಿಲ್ಲ. ನಾನಾ ಬಡಾವಣೆಗಳ ಒಳಚರಂಡಿ ನೀರೂ ಕೆರೆ ಸೇರುತ್ತಿದೆ ಎಂಬ ಆರೋಪಗಳಿವೆ. ಸ್ಥಳೀಯ ನಿವಾಸಿಗಳು, ಬೆಳಿಗ್ಗೆ ವಾಕಿಂಗ್‌ ಬರುವವರು ಹಲವು ಸಲ ಈ ಸಂಬಂಧ ಹೋರಾಟ ನಡೆಸಿದ್ದಾರೆ. ಆದರೆ ಕಲುಷಿತ ನೀರು ತಡೆಗೆ ಕಾಯಂ ಪ್ರಯತ್ನ ನಡೆದಿಲ್ಲ.

lokesh

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

1 hour ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

2 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

2 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

5 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

6 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

6 hours ago