ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ.
ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ತೀವ್ರ ಶೋಧ ಕೈಗೊಂಡಿದ್ದಾರೆ.
ಇದನ್ನು ಓದಿ: ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್ಡಿಎಕ್ಸ್ ಸ್ಫೋಟಕ ಇಡಲಾಗಿದೆ. ಅದು ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂಬ ಸಂದೇಶವೊಂದು ಅಪರಿಚಿತ ವ್ಯಕ್ತಿಯ ಇಮೇಲ್ ವಿಳಾಸದಿಂದ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು, ಸಾರ್ವಜನಿಕರು, ಸುತ್ತಮುತ್ತಲಿನ ಪ್ರದೇಶದ ಜನರು ಆತಂಕಗೊಂಡಿದ್ದಾರೆ. ಮಾಹಿತಿ ಪಡೆದ ಬಳಿಕ ಸರಗೂರು ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಡೌಡಾಯಿಸಿದ್ದು, ಶೋಧ ನಡೆಸುತ್ತಿದ್ದಾರೆ.
ಇನ್ನು ಹಾಸನ ಜಿಲ್ಲೆ ಆಲೂರು ತಾಲ್ಲೂಕು ಕಚೇರಿಗೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕಚೇರಿ ಸಿಬ್ಬಂದಿ ತಹಶೀಲ್ದಾರ್ ಮಲ್ಲಿಕಾರ್ಜುನ ಅವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ತಹಶೀಲ್ದಾರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಚೇರಿ ಸಿಬ್ಬಂದಿಯನ್ನೆಲ್ಲಾ ಹೊರಕ್ಕೆ ಕಳುಹಿಸಿ ತಪಾಸಣೆ ನಡೆಸಿದ್ದಾರೆ.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್ನ ಪೋರಬಂದರ್ನಲ್ಲಿ ಗೋಕುಲ್ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…