ಮೈಸೂರು

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ.

ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದು, ತೀವ್ರ ಶೋಧ ಕೈಗೊಂಡಿದ್ದಾರೆ.

ಇದನ್ನು ಓದಿ: ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಡಲಾಗಿದೆ. ಅದು ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂಬ ಸಂದೇಶವೊಂದು ಅಪರಿಚಿತ ವ್ಯಕ್ತಿಯ ಇಮೇಲ್‌ ವಿಳಾಸದಿಂದ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು, ಸಾರ್ವಜನಿಕರು, ಸುತ್ತಮುತ್ತಲಿನ ಪ್ರದೇಶದ ಜನರು ಆತಂಕಗೊಂಡಿದ್ದಾರೆ. ಮಾಹಿತಿ ಪಡೆದ ಬಳಿಕ ಸರಗೂರು ಪೊಲೀಸರು ಬಾಂಬ್‌ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಡೌಡಾಯಿಸಿದ್ದು, ಶೋಧ ನಡೆಸುತ್ತಿದ್ದಾರೆ.

ಇನ್ನು ಹಾಸನ ಜಿಲ್ಲೆ ಆಲೂರು ತಾಲ್ಲೂಕು ಕಚೇರಿಗೂ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ಕಚೇರಿ ಸಿಬ್ಬಂದಿ ತಹಶೀಲ್ದಾರ್‌ ಮಲ್ಲಿಕಾರ್ಜುನ ಅವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ತಹಶೀಲ್ದಾರ್‌ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಚೇರಿ ಸಿಬ್ಬಂದಿಯನ್ನೆಲ್ಲಾ ಹೊರಕ್ಕೆ ಕಳುಹಿಸಿ ತಪಾಸಣೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಸೆಸ್ಕಾಂ ಎಇ ಲೋಕಾ ಬಲೆಗೆ

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…

10 mins ago

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…

5 hours ago

ಸಂಸತ್‌ ಮುಂಗಾರು ಅಧಿವೇಶನ: ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…

8 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ: ಜಾಗೃತ ಕರ್ನಾಟಕ ಆತಂಕ

ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…

9 hours ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಪುಟ ವಿಸ್ತರಣೆ ನಿರೀಕ್ಷೆ: ಸಂಕಟ ಪರೀಕ್ಷೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…

12 hours ago