Threat to circulate young woman's photo on social media: FIR filed against four individuals
ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್ಐಆರ್ ದಾಖಲಾಗಿದೆ.
ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ದೂರು ದಾಖಲಾಗಿದೆ.
ಕಳೆದ 9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಎಂಬವರ ಪರಿಚಯವಾಗಿದೆ. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿದೆ. ಮದುವೆ ಪ್ರಸ್ತಾಪವಾಗಿದೆ. ಈ ನಡುವೆ ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್ಗಳನ್ನ ಪಡೆದಿದ್ದಾನೆ. ಆಕೆ ಬೈಕ್ ಹಣ ಹಿಂದಿರುಗಿಸಿದರೂ ಚೆಕ್ಗಳನ್ನ ಹಿಂದಿರುಗಿಸಿಲ್ಲ. ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ. ಇಬ್ಬರೂ ಹಲವಾರು ಸ್ಥಳಗಳಲ್ಲಿ ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ. ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.
ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ. ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಆಕೆ ನೀಡಿದ್ದ ಚೆಕ್ಗಳನ್ನು ಸ್ನೇಹಿತನ ಹೆಸರಲ್ಲಿ 8.50 ಲಕ್ಷ ರೂ. ಹಣ ಬರೆದು ಬ್ಯಾಂಕ್ಕೆ ನೀಡುವ ಮೂಲಕ ಚೆಕ್ ಬೌನ್ಸ್ ಮಾಡಿಸಿದ್ದಾನೆ.
ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ. ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.
ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ನಿಲ್ಲಿಸಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸದಾನಂದಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…