ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಯುವತಿ ಫೋಟೊ ಹರಿಬಿಡುವ ಬೆದರಿಕೆ : ನಾಲ್ವರ ವಿರುದ್ದ FIR ದಾಖಲು

ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ದೂರು ದಾಖಲಾಗಿದೆ.

ಕಳೆದ 9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಎಂಬವರ ಪರಿಚಯವಾಗಿದೆ. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿದೆ. ಮದುವೆ ಪ್ರಸ್ತಾಪವಾಗಿದೆ. ಈ ನಡುವೆ ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್‌ಗಳನ್ನ ಪಡೆದಿದ್ದಾನೆ. ಆಕೆ ಬೈಕ್ ಹಣ ಹಿಂದಿರುಗಿಸಿದರೂ ಚೆಕ್‌ಗಳನ್ನ ಹಿಂದಿರುಗಿಸಿಲ್ಲ. ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ. ಇಬ್ಬರೂ ಹಲವಾರು ಸ್ಥಳಗಳಲ್ಲಿ ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ. ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.

ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ. ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಆಕೆ ನೀಡಿದ್ದ ಚೆಕ್‌ಗಳನ್ನು ಸ್ನೇಹಿತನ ಹೆಸರಲ್ಲಿ 8.50 ಲಕ್ಷ ರೂ. ಹಣ ಬರೆದು ಬ್ಯಾಂಕ್‌ಕೆ ನೀಡುವ ಮೂಲಕ ಚೆಕ್ ಬೌನ್ಸ್ ಮಾಡಿಸಿದ್ದಾನೆ.

ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ. ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.

ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ನಿಲ್ಲಿಸಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸದಾನಂದಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago