g parameshwara opinion about janivara
ಮೈಸೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿರುವ ಕರೆಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆದರಿಕೆ ಹಾಕುವವರ ಮೇಲೆ ಕಠಿಣ ಕ್ರಮಕೈಗೊಳ್ಳದ ಹೊರತು, ಇಂತಹ ಪ್ರಕರಣಗಳು ನಿಲ್ಲುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಇದನ್ನು ಓದಿ: ಜೀವ ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ್ ಖರ್ಗೆ
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಎಂಬುದನ್ನು ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಕ್ರಮಕೈಗೊಳ್ಳುತ್ತಾರೆ. ಸರ್ಕಾರ ಕೂಡ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ತಿಳಿಸಿದರು.
ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ನಾನು ಆ ಬಗ್ಗೆ ನಿರ್ಧಾರಗಳನ್ನು ಹೇಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರೇ ತೀರ್ಮಾನ ಮಾಡಲಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿರುವುದನ್ನು ಪರಿಗಣಿಸಿದ್ದೇವೆ. ಯಾವ್ಯಾವ ನಂಬರ್ಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಬೆದರಿಕೆ ಹಾಕುವವರ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಇಂತಹ ಪ್ರಕರಣಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…