ಮೈಸೂರು

ಇಡಿ ದಾಳಿ ಮೂಲಕ ಸಿದ್ದರಾಮಯ್ಯರನ್ನು ಬೆದರಿಸುವ ಕೆಲಸ: ಎಂ.ಲಕ್ಷ್ಮಣ್‌

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲೆ ಇ.ಡಿ.ದಾಳಿ ಮಾಡಿರುವುದು ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ. ರಾಜ್ಯದ ಜನತೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ. ಎರಡೂ ದಿನ ದಾಳಿ ಮಾಡಿತ್ತು. ಈ ವೇಳೆ ಅನೇಕ ದಾಖಲೆಯನ್ನು ಕೊಂಡೊಯ್ಯಲಾಗಿದೆ. ಯಾವುದಾದರೂ ತನಿಖಾ ಸಂಸ್ಥೆ ವರದಿ ನೀಡಿ ಮನಿ ಲಾಂಡ್ರಿಂಗ್‌ ಆಗಿದ್ದರೆ ಹಣ ಅವ್ಯವಹಾರ ಆಗಿದ್ರೆ ಇ.ಡಿ. ಎಂಟ್ರಿ ಆಗಬೇಕು. ಆದರೆ, ಈ ವಿಚಾರದಲ್ಲಿ ಮೈಸೂರು ಲೋಕಾಯುಕ್ತ ಮತ್ತು ನ್ಯಾಯಾಧೀಶರ ತನಿಖಾ ತಂಡ ತನಿಖೆ ಮಾಡುವ ಹಂತದಲ್ಲೇ ಇ.ಡಿ. ದಾಳಿ ಮಾಡಿದೆ. ಹೀಗಾಗಿ ಈ ಇಡಿ ರೇಡ್‌ ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ ಎಂದು ಕಿಡಿಕಾರಿದ್ದಾರೆ.

ಮುಡಾ ಕಚೇರಿಯ ಮೇಲೆ ಇಡಿ ರೇಡ್‌ ಮಾಡಿದ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಠಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಕ್ರೈಂ ನಡೆಯುವ ಮೊದಲೇ ಕೆಲವು ಮುಡಾ ಅಧಿಕಾರಿಗಳನ್ನು ಬೆದರಿಸಿ ಸಹಿ ಮಾಡಿಸಿಕೊಳ್ಳುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಇ.ಡಿ ಅಧಿಕಾರಿಗಳ ಬಗ್ಗೆ ಕೋರ್ಟ್‌ ಗಮನಕ್ಕೆ ತರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಉಪ ಚುನಾವಣೆಯ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ನೋಟೀಸ್‌ ನೀಡುವ ಸಾಧ್ಯತೆ ಇದೆ. ಬಿಜೆಪಿ ಅವರ ಮನಸ್ಥಿತಿ ಏನು ಎಂಬುದನ್ನು ಈ ಮೂಲಕ ತಿಳಿಯಬಹುದು. ಸಾವಿರಾರು ಕೋಟಿ ರೂ.ಗಳಲ್ಲಿ ಭಾಗಿಯಾಗಿರುವ ನಾಯಕರು ಬಿಜೆಪಿ ಬೆಂಬಲಿಸಿದರೆ ಇ.ಡಿ ಅವರೆ ಕ್ಲಿನ್‌ಚೀಟ್‌ ಕೊಡುತ್ತಾರೆ. ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅಜಿತ್‌ ಪವಾರ್‌ ಸೇರಿದಂತೆ ಅನೇಕ ನಾಯಕರ ಹಗರಣಗಳಿಗೆ ಕ್ಲಿನ್‌ಚೀಟ್‌ ನೀಡಲಾಗಿದೆ. ಹೀಗಾಗಿ ಬಿಜೆಪಿ ಪಕ್ಷದವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

19 mins ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

42 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

1 hour ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

2 hours ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

2 hours ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

3 hours ago