ಮೈಸೂರು

ಇಡಿ ದಾಳಿ ಮೂಲಕ ಸಿದ್ದರಾಮಯ್ಯರನ್ನು ಬೆದರಿಸುವ ಕೆಲಸ: ಎಂ.ಲಕ್ಷ್ಮಣ್‌

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲೆ ಇ.ಡಿ.ದಾಳಿ ಮಾಡಿರುವುದು ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ. ರಾಜ್ಯದ ಜನತೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ. ಎರಡೂ ದಿನ ದಾಳಿ ಮಾಡಿತ್ತು. ಈ ವೇಳೆ ಅನೇಕ ದಾಖಲೆಯನ್ನು ಕೊಂಡೊಯ್ಯಲಾಗಿದೆ. ಯಾವುದಾದರೂ ತನಿಖಾ ಸಂಸ್ಥೆ ವರದಿ ನೀಡಿ ಮನಿ ಲಾಂಡ್ರಿಂಗ್‌ ಆಗಿದ್ದರೆ ಹಣ ಅವ್ಯವಹಾರ ಆಗಿದ್ರೆ ಇ.ಡಿ. ಎಂಟ್ರಿ ಆಗಬೇಕು. ಆದರೆ, ಈ ವಿಚಾರದಲ್ಲಿ ಮೈಸೂರು ಲೋಕಾಯುಕ್ತ ಮತ್ತು ನ್ಯಾಯಾಧೀಶರ ತನಿಖಾ ತಂಡ ತನಿಖೆ ಮಾಡುವ ಹಂತದಲ್ಲೇ ಇ.ಡಿ. ದಾಳಿ ಮಾಡಿದೆ. ಹೀಗಾಗಿ ಈ ಇಡಿ ರೇಡ್‌ ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ ಎಂದು ಕಿಡಿಕಾರಿದ್ದಾರೆ.

ಮುಡಾ ಕಚೇರಿಯ ಮೇಲೆ ಇಡಿ ರೇಡ್‌ ಮಾಡಿದ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಠಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಕ್ರೈಂ ನಡೆಯುವ ಮೊದಲೇ ಕೆಲವು ಮುಡಾ ಅಧಿಕಾರಿಗಳನ್ನು ಬೆದರಿಸಿ ಸಹಿ ಮಾಡಿಸಿಕೊಳ್ಳುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಇ.ಡಿ ಅಧಿಕಾರಿಗಳ ಬಗ್ಗೆ ಕೋರ್ಟ್‌ ಗಮನಕ್ಕೆ ತರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಉಪ ಚುನಾವಣೆಯ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ನೋಟೀಸ್‌ ನೀಡುವ ಸಾಧ್ಯತೆ ಇದೆ. ಬಿಜೆಪಿ ಅವರ ಮನಸ್ಥಿತಿ ಏನು ಎಂಬುದನ್ನು ಈ ಮೂಲಕ ತಿಳಿಯಬಹುದು. ಸಾವಿರಾರು ಕೋಟಿ ರೂ.ಗಳಲ್ಲಿ ಭಾಗಿಯಾಗಿರುವ ನಾಯಕರು ಬಿಜೆಪಿ ಬೆಂಬಲಿಸಿದರೆ ಇ.ಡಿ ಅವರೆ ಕ್ಲಿನ್‌ಚೀಟ್‌ ಕೊಡುತ್ತಾರೆ. ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅಜಿತ್‌ ಪವಾರ್‌ ಸೇರಿದಂತೆ ಅನೇಕ ನಾಯಕರ ಹಗರಣಗಳಿಗೆ ಕ್ಲಿನ್‌ಚೀಟ್‌ ನೀಡಲಾಗಿದೆ. ಹೀಗಾಗಿ ಬಿಜೆಪಿ ಪಕ್ಷದವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

1 hour ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago