ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಶ್ರೀ ಭಾಸ್ಕರ ಸ್ವಾಮಿ ದೇವಸ್ಥಾನದ ಬಳಿ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಸೋಮುವಾರ ಸಂಜೆ ನಡೆದಿದೆ.
ಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ ಶಕೀಲ್ ಅವರ ಮಕ್ಕಳಾದ ಆಯಾನ್ (೧೫) ಮತ್ತು ಅಜನ್ (೧೩), ಪಟ್ಟಣದ ಮುಬಾರಕ್ ಅವರ ಮಗ ಲುಕ್ಮಾನ್ (೧೪) ಮೃತಪಟ್ಟಿರುವ ಬಾಲಕರು.
ಆಯಾನ್ ಎಸ್.ಎಸ್.ಎಲ್.ಸಿ. ಓದುತ್ತಿದ್ದು, ಅಜನ್ ೭ನೇ ತರಗತಿ ವಿದ್ಯಾರ್ಥಿ. ಇವರಿಬ್ಬರೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮತ್ತೊಬ್ಬ ಬಾಲಕ ಪಟ್ಟಣದ ಮುಬಾರಕ್ ಅವರ ಮಗ ಲುಕ್ಮಾನ್ ಸಾಲಿಗ್ರಾಮ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ.
ಈ ಮೂವರೂ ವಿದ್ಯಾರ್ಥಿಗಳು ಸೋಮವಾರ ದೀಪಾವಳಿ ರಜೆ ಇದ್ದುದರಿಂದ ಮಧ್ಯಾಹ್ನ ನಾಲೆಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು, ಪೋಷಕರು, ಸಾರ್ವಜನಿಕರು, ಅಗ್ನಿಶಾಮಕ ದಳದವರು ಆಗಮಿಸಿ ಮೃತದೇಹಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದು, ಮೂವರೂ ಬಾಲಕರ ಮೃತದೇಹಗಳು ಪತ್ತೆಯಾಗಿದ್ದು, ಕೃಷ್ಣರಾಜನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಸ್ಥಳದಲ್ಲಿ ಮೃತ ವಿದ್ಯಾರ್ಥಿಗಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಸಾರ್ವಜನಿಕರು ಮಕ್ಕಳ ಸಾವನ್ನು ಕಂಡು ಕಂಬನಿ ಮಿಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…