ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಶ್ರೀ ಭಾಸ್ಕರ ಸ್ವಾಮಿ ದೇವಸ್ಥಾನದ ಬಳಿ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಸೋಮುವಾರ ಸಂಜೆ ನಡೆದಿದೆ.
ಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ ಶಕೀಲ್ ಅವರ ಮಕ್ಕಳಾದ ಆಯಾನ್ (೧೫) ಮತ್ತು ಅಜನ್ (೧೩), ಪಟ್ಟಣದ ಮುಬಾರಕ್ ಅವರ ಮಗ ಲುಕ್ಮಾನ್ (೧೪) ಮೃತಪಟ್ಟಿರುವ ಬಾಲಕರು.
ಆಯಾನ್ ಎಸ್.ಎಸ್.ಎಲ್.ಸಿ. ಓದುತ್ತಿದ್ದು, ಅಜನ್ ೭ನೇ ತರಗತಿ ವಿದ್ಯಾರ್ಥಿ. ಇವರಿಬ್ಬರೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮತ್ತೊಬ್ಬ ಬಾಲಕ ಪಟ್ಟಣದ ಮುಬಾರಕ್ ಅವರ ಮಗ ಲುಕ್ಮಾನ್ ಸಾಲಿಗ್ರಾಮ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ.
ಈ ಮೂವರೂ ವಿದ್ಯಾರ್ಥಿಗಳು ಸೋಮವಾರ ದೀಪಾವಳಿ ರಜೆ ಇದ್ದುದರಿಂದ ಮಧ್ಯಾಹ್ನ ನಾಲೆಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು, ಪೋಷಕರು, ಸಾರ್ವಜನಿಕರು, ಅಗ್ನಿಶಾಮಕ ದಳದವರು ಆಗಮಿಸಿ ಮೃತದೇಹಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದು, ಮೂವರೂ ಬಾಲಕರ ಮೃತದೇಹಗಳು ಪತ್ತೆಯಾಗಿದ್ದು, ಕೃಷ್ಣರಾಜನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಸ್ಥಳದಲ್ಲಿ ಮೃತ ವಿದ್ಯಾರ್ಥಿಗಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಸಾರ್ವಜನಿಕರು ಮಕ್ಕಳ ಸಾವನ್ನು ಕಂಡು ಕಂಬನಿ ಮಿಡಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…