ಮೈಸೂರು

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ಕೋವಿಡ್ ನಂತರ ಗ್ರಾಹಕರಲ್ಲಿ ಅರಿವು ಹೆಚ್ಚುತ್ತಿರುವುದರಿಂದ, ಮೂಲೆಗುಂಪಾಗಿದ್ದ ಹುಚ್ಚೆಳ್ಳು, ಎಳ್ಳು, ಕುಸುಬೆ, ಹರಳು, ಅಗಸೆ ಮೊದಲಾದ ಎಣ್ಣೆಕಾಳು ಬೆಳೆಗಳಿಂದ ತಯಾರಾಗುವ ಎಣ್ಣೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಇದು ರೈತರಿಗೆ ಬೆಳೆ ವೈವಿಧ್ಯತೆ ಹೆಚ್ಚಿಸಿಕೊಳ್ಳಲು, ಮತ್ತು ಆದಾಯ ವೃದ್ಧಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಹವಾಮಾನ ವೈಪರಿತ್ಯಕ್ಕೆ ಹೈರಾಣಾಗಿರುವ ರೈತರು ಸುಲಭವಾಗಿ ಎಣ್ಣೆಕಾಳು ಬೆಳೆಗಳನ್ನು ಬೆಳೆದುಕೊಳ್ಳಬಹುದು.

ಮಾರುಕಟ್ಟೆಯಲ್ಲಿ ಸಿಗುವ ಅಡುಗೆ ಎಣ್ಣೆಗೆ ಲಿಕ್ವಿಡ್ ಪ್ಯಾರಾಪಿನ್ ಕಲಬೆರಕೆ ಮಾಡುವುದರಿಂದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ರಕ್ತದೊತ್ತಡ ಮೊದಲಾದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬಿಟಿ ಹತ್ತಿಯ ಕಾಳಿನ ಎಣ್ಣೆಯನ್ನು ಅಡುಗೆ ಎಣ್ಣೆಗೆ ಮಿಶ್ರಮಾಡುವುದರಿಂದ ಅನಾರೋಗ್ಯವನ್ನು ಆಹ್ವಾನಿಸಿದಂತಾಗುತ್ತದೆ. ಶುಧ್ಧವಾಗಿ ತಯಾರಿಸಿದ ಗಾಣದ ಎಣ್ಣೆಗಳ ಬಳಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು.

ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜನವರಿ 9 ರಿಂದ 11 ರವರೆಗೆ ‘ದೇಸಿ ಎಣ್ಣೆ ಮೇಳ’ ವನ್ನು ಏರ್ಪಡಿಸಿದೆ.

ಮೂರು ದಿನಗಳ ಕಾಲ ಮೈಸೂರಿನ ನಂಜಬಹದ್ದೂರು ಛತ್ರದಲ್ಲಿ ನಡೆಯಲಿರುವ ಎಣ್ಣೆ ಮೇಳದಲ್ಲಿ 50 ಕ್ಕೂ ಹೆಚ್ಚು ಸಾಂಪ್ರದಾಯಿಕ ಎಣ್ಣೆಗಳನ್ನು ಪರಿಚಯಿಸಲಾಗುವುದು. ಎತ್ತಿನ ಗಾಣದಿಂದ ಅಡುಗೆ ಎಣ್ಣೆ ತೆಗೆಯುವ ಹಾಗೂ ಹರಳೆಣ್ಣೆ ತೆಗೆಯುವ ಪ್ರಾತ್ಯಕ್ಷಿಕೆಯನ್ನು ಮೇಳದಲ್ಲಿ ಖುದ್ದಾಗಿ ನೋಡಬಹುದು.

ಸಿಎಫ್‌ಟಿಆರ್‌ಐ ವಿಜ್ಞಾನಿಗಳು ಕಲಬೆರಕೆ ಎಣ್ಣೆಯನ್ನು ಪತ್ತೆ ಹಚ್ಚುವ ವಿಧಾನವನ್ನು ತೋರಿಸಿಕೊಡಲಿದ್ದಾರೆ. ಆಯುರ್ವೇದ ವೈದ್ಯರಿಂದ ಉಚಿತ ಸಲಹೆ ಮತ್ತು ಎಣ್ಣೆ ಬಳಕೆಯ ಮಾರ್ಗದರ್ಶನ ನೀಡಲಿದ್ದಾರೆ. ಆಹಾರ ತಜ್ಞರು ವಿವಿಧ ದೇಹ ಪ್ರಕೃತಿಗಳಿಗೆ ಯೋಗ್ಯವಾದ ಎಣ್ಣೆಗಳ ಬಳಕೆಯ ತಿಳಿಸಿಕೊಡಲಿದ್ದಾರೆ.

ಶುಕ್ರವಾರ ( ಜ.9) ಸಂಜೆ 6 ಘಂಟೆಗೆ ಡಾ. ಖಾದರ್ ವಲಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವಿರುತ್ತದೆ. ಶನಿವಾರ ( ಜ.10) ಬೆಳಿಗ್ಗೆ 11 ಘಂಟೆಗೆ ಎಣ್ಣೆ ಬೆಳೆಗಳ ಕೃಷಿ ಮತ್ತು ಮೌಲ್ಯವರ್ಧನೆಯ ಬಗ್ಗೆ ತರಬೇತಿ ಏರ್ಪಾಡಾಗಿದೆ.

ಭಾನುವಾರ ( ಜ.11)ರಂದು ಬೆಳಿಗ್ಗೆ 10.30 ಕ್ಕೆ ಸಾಂಪ್ರದಾಯಿಕ ಎಣ್ಣೆಗಳ ಬಗ್ಗೆ ಎಳೆಯರಲ್ಲಿ ಅರಿವು ಮೂಡಿಸಲು 5-12 ವರ್ಷದ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿದೆ. ಎಣ್ಣೆ ಬೀಜಗಳು ಮತ್ತು ಕೃಷಿ, ಎತ್ತುಗಳಿಂದ ಚಾಲಿತವಾಗುವ ಗಾಣ, ರೈತರು ಮತ್ತು ಎಣ್ಣೆ ಹೊರತೆಗೆಯುವ ಪ್ರಕ್ರಿಯೆಯನ್ನು ಚಿತ್ರದ ಮೂಲಕ ತೋರಿಸಬೇಕು. ಆರೋಗ್ಯಕರ ಎಣ್ಣೆ, ಹಳ್ಳಿಯ ಆರ್ಥಿಕತೆ, ಮತ್ತು ಪರಿಸರ ಸ್ನೇಹಿ ಎಂಬ ಸಂದೇಶಗಳನ್ನು ಚಿತ್ರವು ಒಳಗೊಂಡಿರಬೇಕು.

ಭಾನುವಾರ ಮಧ್ಯಾಹ್ನ 12 ಘಂಟೆಗೆ ‘ಸಾಂಪ್ರದಾಯಿಕ ಎಣ್ಣೆಗಳ ಅಡುಗೆ ಸ್ಪರ್ಧೆ’ ಏರ್ಪಡಿಸಲಾಗಿದೆ. ಸಾಂಪ್ರದಾಯಿಕ ಎಣ್ಣೆಗಳಿಂದ ತಯಾರಿಸಿದ ಅಡುಗೆಗಳನ್ನು ಸ್ಪರ್ಧೆಗೆ ತರಬೇಕು. ಅಪರೂಪದ ಎಣ್ಣೆ ಬಳಸಿದ ಅಡುಗೆಗಳಿಗೆ ಆದ್ಯತೆ ನೀಡಲಾಗುವುದು. ಬಹುಮಾನ ಗಳಿಸಿದ ಸ್ಪರ್ಧಿಗಳಿಗೆ ನಗದು ಬಹುಮಾನ ನೀಡಲಾಗುವುದು.

ಮೇಳದಲ್ಲಿ 50ಕ್ಕೂ ಹೆಚ್ಚು ಗುಡಿ ಕೈಗಾರಿಕೆ ಮಳಿಗೆಗಳು ಇರಲಿವೆ. ವೈವಿಧ್ಯಮಯ ದೇಸಿ ಆಹಾರ ಸವಿಯಬಹುದು. ಸಾವಯವ ಉತ್ಪನ್ನಗಳು, ಸಿರಿಧಾನ್ಯ, ನಾಟಿ ಬೀಜ ಮತ್ತು ಹಣ್ಣಿನ ಗಿಡಗಳು ಕೊಳ್ಳಲು ಸಿಗಲಿವೆ.

ದೇಸಿ ಎಣ್ಣೆ ಮೇಳವನ್ನು ಶ್ರೀ ಮಂಟೇಸ್ವಾಮಿ ಮಠ ಮತ್ತು ಶ್ರೀ ಕಪ್ಪಡಿ ಕ್ಷೇತ್ರದ ಮಠಾಧಿಪತಿಗಳಾದ ಶ್ರೀಕಂಠ ಸಿದ್ಧಲಿಂಗ ರಾಜೇ ಅರಸ್ ಅವರು‌ ಉದ್ಘಾಟಿಸಲಿದ್ದಾರೆ. ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು ಸಾಂಪ್ರದಾಯಿಕ ಎತ್ತಿನ ಗಾಣಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಸಿಎಫ್‌ಟಿಆರ್‌ಐ ನಿರ್ದೇಶಕರಾದ ಡಾ. ಗಿರಿಧರ್ ಪಾರ್ವತಮಂ ಮತ್ತು ಪ್ರಿಸಿಷನ್ ಮೆಡಿಸಿನ್ ವಿಜ್ಞಾನಿ ಡಾ.ಮಮತ ಶೇಖರ್ ಭಾಗವಹಿಸಲಿದ್ದಾರೆ.

ದೇಸಿ ಎಣ್ಣೆ ಮೇಳದ ಪ್ರಮುಖ ಆಕರ್ಷಣೆಗಳು

– ಸಾಂಪ್ರದಾಯ ಪದ್ದತಿಯಲ್ಲಿ ಎತ್ತಿನ ಗಾಣದಿಂದ ಅಡುಗೆ ಎಣ್ಣೆ ತೆಗೆಯುವ ಹಾಗು ಹರಳೆಣ್ಣೆ ತೆಗೆಯುವ ಪ್ರಾತ್ಯಕ್ಷಿತೆ
– 50 ಕ್ಕೂ ಹೆಚ್ಚು ವಿವಿಧ ಬಗೆಯ ಎಣ್ಣೆಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.
– ವಿವಿಧ ಎಣ್ಣೆ ಕಾಳು ಬೆಳೆಗಳ ಬೀಜದ ಪ್ರದರ್ಶನ
– ಕಲಬೆರಕೆ ಎಣ್ಣೆಯನ್ನು ಪತ್ತೆ ಹಚ್ಚುವ ವಿಧಾನದ ಪ್ರಾತ್ಯಕ್ಷಿತೆ
– ಆಯುರ್ವೇದ ವೈದ್ಯರಿಂದ ಉಚಿತ ಸಲಹೆ ಮತ್ತು ಆರೋಗ್ಯಕ್ಕೂ ಎಣ್ಣೆಗಳಿಗೂ ಇರುವ ಸಂಬAಧದ ಮಾಹಿತಿ
– ಡಾ. ಖಾದರ್ ವಲಿ ಅವರ ಉಪನ್ಯಾಸ ಜನವರಿ 9 ರಂದು ಸಂಜೆ 6 ಗಂಟೆಗೆ.
– ಎಣ್ಣೆಕಾಳು ಕೃಷಿ ಮತ್ತು ಮೌಲ್ಯವರ್ಧನೆಯ ರೈತ ತರಬೇತಿ ಕಾರ್ಯಕ್ರಮ ಜನವರಿ 10 ರಂದು ಬೆಳಗ್ಗೆ 11 ಗಂಟೆಗೆ.
– ಜನವರಿ 11 ರಂದು ಬೆಳಗ್ಗೆ 10.30ಕ್ಕೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಮತ್ತು ಮಧ್ಯಾಹ್ನ 12 ಗಂಟೆಗೆ ಅಡುಗೆ ಸ್ಪರ್ಧೆ
– ಹೋಮಿಯೋಪತಿ, ಅಲೋಪತಿ, ಆಯುರ್ವೇದ, ಯುನಾನಿ ಮತ್ತು ಪೌಷ್ಟಿಕತೆ ತಜ್ಞ ವೈದ್ಯರೊಂದಿಗೆ ಸಂವಾದ
– ಗುಡಿ ಕೈಗಾರಿಕೆ ಉದ್ಯಮಗಳ ಮಾರಾಟ ಮಳಿಗೆಗಳು
– ಸಾಂಪ್ರದಾಯಿಕ ಎಣ್ಣೆ ಬಳಸಿದ ಅಡುಗೆ ಮಳಿಗೆಗಳಲ್ಲಿ, ವೈವಿಧ್ಯಮಯ ಆಹಾರ ಸವಿಯುವ ಅವಕಾಶ
– ದೇಸಿ ಬೀಜ, ಹಣ್ಣಿನ ಗಿಡ, ಸಾವಯವ ಬೆಲ್ಲ, ಅಕ್ಕಿ , ಸಿರಿಧಾನ್ಯ ಮತ್ತು ಕೃಷಿ ಉತ್ಪನ್ನಗಳ ಮಾರಾಟ
-ಸಂಕ್ರಾತಿಗಾಗಿ ಸಾವಯವ ಎಳ್ಳು ಬೆಲ್ಲ, ಅವರೆ, ಶೇಂಗಾ, ಗೆಣಸು ಕೊಳ್ಳುವ ಅವಕಾಶ

ಹೆಚ್ಚಿನ ವಿವರಗಳಿಗೆ 7090009944 ಸಂಪರ್ಕಿಸಬಹುದು. 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

2 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

6 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

6 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

7 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

7 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

7 hours ago