ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ಕೋವಿಡ್ ನಂತರ ಗ್ರಾಹಕರಲ್ಲಿ ಅರಿವು ಹೆಚ್ಚುತ್ತಿರುವುದರಿಂದ, ಮೂಲೆಗುಂಪಾಗಿದ್ದ ಹುಚ್ಚೆಳ್ಳು, ಎಳ್ಳು, ಕುಸುಬೆ, ಹರಳು, ಅಗಸೆ ಮೊದಲಾದ ಎಣ್ಣೆಕಾಳು ಬೆಳೆಗಳಿಂದ ತಯಾರಾಗುವ ಎಣ್ಣೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಇದು ರೈತರಿಗೆ ಬೆಳೆ ವೈವಿಧ್ಯತೆ ಹೆಚ್ಚಿಸಿಕೊಳ್ಳಲು, ಮತ್ತು ಆದಾಯ ವೃದ್ಧಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಹವಾಮಾನ ವೈಪರಿತ್ಯಕ್ಕೆ ಹೈರಾಣಾಗಿರುವ ರೈತರು ಸುಲಭವಾಗಿ ಎಣ್ಣೆಕಾಳು ಬೆಳೆಗಳನ್ನು ಬೆಳೆದುಕೊಳ್ಳಬಹುದು.
ಮಾರುಕಟ್ಟೆಯಲ್ಲಿ ಸಿಗುವ ಅಡುಗೆ ಎಣ್ಣೆಗೆ ಲಿಕ್ವಿಡ್ ಪ್ಯಾರಾಪಿನ್ ಕಲಬೆರಕೆ ಮಾಡುವುದರಿಂದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ರಕ್ತದೊತ್ತಡ ಮೊದಲಾದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬಿಟಿ ಹತ್ತಿಯ ಕಾಳಿನ ಎಣ್ಣೆಯನ್ನು ಅಡುಗೆ ಎಣ್ಣೆಗೆ ಮಿಶ್ರಮಾಡುವುದರಿಂದ ಅನಾರೋಗ್ಯವನ್ನು ಆಹ್ವಾನಿಸಿದಂತಾಗುತ್ತದೆ. ಶುಧ್ಧವಾಗಿ ತಯಾರಿಸಿದ ಗಾಣದ ಎಣ್ಣೆಗಳ ಬಳಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು.
ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜನವರಿ 9 ರಿಂದ 11 ರವರೆಗೆ ‘ದೇಸಿ ಎಣ್ಣೆ ಮೇಳ’ ವನ್ನು ಏರ್ಪಡಿಸಿದೆ.
ಮೂರು ದಿನಗಳ ಕಾಲ ಮೈಸೂರಿನ ನಂಜಬಹದ್ದೂರು ಛತ್ರದಲ್ಲಿ ನಡೆಯಲಿರುವ ಎಣ್ಣೆ ಮೇಳದಲ್ಲಿ 50 ಕ್ಕೂ ಹೆಚ್ಚು ಸಾಂಪ್ರದಾಯಿಕ ಎಣ್ಣೆಗಳನ್ನು ಪರಿಚಯಿಸಲಾಗುವುದು. ಎತ್ತಿನ ಗಾಣದಿಂದ ಅಡುಗೆ ಎಣ್ಣೆ ತೆಗೆಯುವ ಹಾಗೂ ಹರಳೆಣ್ಣೆ ತೆಗೆಯುವ ಪ್ರಾತ್ಯಕ್ಷಿಕೆಯನ್ನು ಮೇಳದಲ್ಲಿ ಖುದ್ದಾಗಿ ನೋಡಬಹುದು.
ಸಿಎಫ್ಟಿಆರ್ಐ ವಿಜ್ಞಾನಿಗಳು ಕಲಬೆರಕೆ ಎಣ್ಣೆಯನ್ನು ಪತ್ತೆ ಹಚ್ಚುವ ವಿಧಾನವನ್ನು ತೋರಿಸಿಕೊಡಲಿದ್ದಾರೆ. ಆಯುರ್ವೇದ ವೈದ್ಯರಿಂದ ಉಚಿತ ಸಲಹೆ ಮತ್ತು ಎಣ್ಣೆ ಬಳಕೆಯ ಮಾರ್ಗದರ್ಶನ ನೀಡಲಿದ್ದಾರೆ. ಆಹಾರ ತಜ್ಞರು ವಿವಿಧ ದೇಹ ಪ್ರಕೃತಿಗಳಿಗೆ ಯೋಗ್ಯವಾದ ಎಣ್ಣೆಗಳ ಬಳಕೆಯ ತಿಳಿಸಿಕೊಡಲಿದ್ದಾರೆ.
ಶುಕ್ರವಾರ ( ಜ.9) ಸಂಜೆ 6 ಘಂಟೆಗೆ ಡಾ. ಖಾದರ್ ವಲಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವಿರುತ್ತದೆ. ಶನಿವಾರ ( ಜ.10) ಬೆಳಿಗ್ಗೆ 11 ಘಂಟೆಗೆ ಎಣ್ಣೆ ಬೆಳೆಗಳ ಕೃಷಿ ಮತ್ತು ಮೌಲ್ಯವರ್ಧನೆಯ ಬಗ್ಗೆ ತರಬೇತಿ ಏರ್ಪಾಡಾಗಿದೆ.
ಭಾನುವಾರ ( ಜ.11)ರಂದು ಬೆಳಿಗ್ಗೆ 10.30 ಕ್ಕೆ ಸಾಂಪ್ರದಾಯಿಕ ಎಣ್ಣೆಗಳ ಬಗ್ಗೆ ಎಳೆಯರಲ್ಲಿ ಅರಿವು ಮೂಡಿಸಲು 5-12 ವರ್ಷದ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿದೆ. ಎಣ್ಣೆ ಬೀಜಗಳು ಮತ್ತು ಕೃಷಿ, ಎತ್ತುಗಳಿಂದ ಚಾಲಿತವಾಗುವ ಗಾಣ, ರೈತರು ಮತ್ತು ಎಣ್ಣೆ ಹೊರತೆಗೆಯುವ ಪ್ರಕ್ರಿಯೆಯನ್ನು ಚಿತ್ರದ ಮೂಲಕ ತೋರಿಸಬೇಕು. ಆರೋಗ್ಯಕರ ಎಣ್ಣೆ, ಹಳ್ಳಿಯ ಆರ್ಥಿಕತೆ, ಮತ್ತು ಪರಿಸರ ಸ್ನೇಹಿ ಎಂಬ ಸಂದೇಶಗಳನ್ನು ಚಿತ್ರವು ಒಳಗೊಂಡಿರಬೇಕು.
ಭಾನುವಾರ ಮಧ್ಯಾಹ್ನ 12 ಘಂಟೆಗೆ ‘ಸಾಂಪ್ರದಾಯಿಕ ಎಣ್ಣೆಗಳ ಅಡುಗೆ ಸ್ಪರ್ಧೆ’ ಏರ್ಪಡಿಸಲಾಗಿದೆ. ಸಾಂಪ್ರದಾಯಿಕ ಎಣ್ಣೆಗಳಿಂದ ತಯಾರಿಸಿದ ಅಡುಗೆಗಳನ್ನು ಸ್ಪರ್ಧೆಗೆ ತರಬೇಕು. ಅಪರೂಪದ ಎಣ್ಣೆ ಬಳಸಿದ ಅಡುಗೆಗಳಿಗೆ ಆದ್ಯತೆ ನೀಡಲಾಗುವುದು. ಬಹುಮಾನ ಗಳಿಸಿದ ಸ್ಪರ್ಧಿಗಳಿಗೆ ನಗದು ಬಹುಮಾನ ನೀಡಲಾಗುವುದು.
ಮೇಳದಲ್ಲಿ 50ಕ್ಕೂ ಹೆಚ್ಚು ಗುಡಿ ಕೈಗಾರಿಕೆ ಮಳಿಗೆಗಳು ಇರಲಿವೆ. ವೈವಿಧ್ಯಮಯ ದೇಸಿ ಆಹಾರ ಸವಿಯಬಹುದು. ಸಾವಯವ ಉತ್ಪನ್ನಗಳು, ಸಿರಿಧಾನ್ಯ, ನಾಟಿ ಬೀಜ ಮತ್ತು ಹಣ್ಣಿನ ಗಿಡಗಳು ಕೊಳ್ಳಲು ಸಿಗಲಿವೆ.
ದೇಸಿ ಎಣ್ಣೆ ಮೇಳವನ್ನು ಶ್ರೀ ಮಂಟೇಸ್ವಾಮಿ ಮಠ ಮತ್ತು ಶ್ರೀ ಕಪ್ಪಡಿ ಕ್ಷೇತ್ರದ ಮಠಾಧಿಪತಿಗಳಾದ ಶ್ರೀಕಂಠ ಸಿದ್ಧಲಿಂಗ ರಾಜೇ ಅರಸ್ ಅವರು ಉದ್ಘಾಟಿಸಲಿದ್ದಾರೆ. ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು ಸಾಂಪ್ರದಾಯಿಕ ಎತ್ತಿನ ಗಾಣಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಸಿಎಫ್ಟಿಆರ್ಐ ನಿರ್ದೇಶಕರಾದ ಡಾ. ಗಿರಿಧರ್ ಪಾರ್ವತಮಂ ಮತ್ತು ಪ್ರಿಸಿಷನ್ ಮೆಡಿಸಿನ್ ವಿಜ್ಞಾನಿ ಡಾ.ಮಮತ ಶೇಖರ್ ಭಾಗವಹಿಸಲಿದ್ದಾರೆ.
ದೇಸಿ ಎಣ್ಣೆ ಮೇಳದ ಪ್ರಮುಖ ಆಕರ್ಷಣೆಗಳು
– ಸಾಂಪ್ರದಾಯ ಪದ್ದತಿಯಲ್ಲಿ ಎತ್ತಿನ ಗಾಣದಿಂದ ಅಡುಗೆ ಎಣ್ಣೆ ತೆಗೆಯುವ ಹಾಗು ಹರಳೆಣ್ಣೆ ತೆಗೆಯುವ ಪ್ರಾತ್ಯಕ್ಷಿತೆ
– 50 ಕ್ಕೂ ಹೆಚ್ಚು ವಿವಿಧ ಬಗೆಯ ಎಣ್ಣೆಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.
– ವಿವಿಧ ಎಣ್ಣೆ ಕಾಳು ಬೆಳೆಗಳ ಬೀಜದ ಪ್ರದರ್ಶನ
– ಕಲಬೆರಕೆ ಎಣ್ಣೆಯನ್ನು ಪತ್ತೆ ಹಚ್ಚುವ ವಿಧಾನದ ಪ್ರಾತ್ಯಕ್ಷಿತೆ
– ಆಯುರ್ವೇದ ವೈದ್ಯರಿಂದ ಉಚಿತ ಸಲಹೆ ಮತ್ತು ಆರೋಗ್ಯಕ್ಕೂ ಎಣ್ಣೆಗಳಿಗೂ ಇರುವ ಸಂಬAಧದ ಮಾಹಿತಿ
– ಡಾ. ಖಾದರ್ ವಲಿ ಅವರ ಉಪನ್ಯಾಸ ಜನವರಿ 9 ರಂದು ಸಂಜೆ 6 ಗಂಟೆಗೆ.
– ಎಣ್ಣೆಕಾಳು ಕೃಷಿ ಮತ್ತು ಮೌಲ್ಯವರ್ಧನೆಯ ರೈತ ತರಬೇತಿ ಕಾರ್ಯಕ್ರಮ ಜನವರಿ 10 ರಂದು ಬೆಳಗ್ಗೆ 11 ಗಂಟೆಗೆ.
– ಜನವರಿ 11 ರಂದು ಬೆಳಗ್ಗೆ 10.30ಕ್ಕೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಮತ್ತು ಮಧ್ಯಾಹ್ನ 12 ಗಂಟೆಗೆ ಅಡುಗೆ ಸ್ಪರ್ಧೆ
– ಹೋಮಿಯೋಪತಿ, ಅಲೋಪತಿ, ಆಯುರ್ವೇದ, ಯುನಾನಿ ಮತ್ತು ಪೌಷ್ಟಿಕತೆ ತಜ್ಞ ವೈದ್ಯರೊಂದಿಗೆ ಸಂವಾದ
– ಗುಡಿ ಕೈಗಾರಿಕೆ ಉದ್ಯಮಗಳ ಮಾರಾಟ ಮಳಿಗೆಗಳು
– ಸಾಂಪ್ರದಾಯಿಕ ಎಣ್ಣೆ ಬಳಸಿದ ಅಡುಗೆ ಮಳಿಗೆಗಳಲ್ಲಿ, ವೈವಿಧ್ಯಮಯ ಆಹಾರ ಸವಿಯುವ ಅವಕಾಶ
– ದೇಸಿ ಬೀಜ, ಹಣ್ಣಿನ ಗಿಡ, ಸಾವಯವ ಬೆಲ್ಲ, ಅಕ್ಕಿ , ಸಿರಿಧಾನ್ಯ ಮತ್ತು ಕೃಷಿ ಉತ್ಪನ್ನಗಳ ಮಾರಾಟ
-ಸಂಕ್ರಾತಿಗಾಗಿ ಸಾವಯವ ಎಳ್ಳು ಬೆಲ್ಲ, ಅವರೆ, ಶೇಂಗಾ, ಗೆಣಸು ಕೊಳ್ಳುವ ಅವಕಾಶ
ಹೆಚ್ಚಿನ ವಿವರಗಳಿಗೆ 7090009944 ಸಂಪರ್ಕಿಸಬಹುದು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…