Mysore
28
light rain

Social Media

ಶುಕ್ರವಾರ, 31 ಜುಲೈ 2026
Light
Dark

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!