ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ ಕಪೀಲ್(42) ಮೃತ ದುರ್ದೈವಿಗಳು. ಇವರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ಸರಗೂರಿನ ತಮ್ಮ ಅಜ್ಜಿಯ ತಿಥಿಕಾರ್ಯ ಮುಗಿಸಿ, ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದಾಗ ಆಯತಪ್ಪಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಾಲು ಜಾರಿ ನಾಲೆಯೊಳಗೆ ಬಿದ್ದ ಶಾಹೀರಾ ಭಾನು ಅವರನ್ನು ತಾಯಿ ಶಾವರ ಬಾನು ರಕ್ಷಿಸಲು ಮುಂದಾಗಿದ್ದಾರೆ. ಆಗ ಶಾವರ ಬಾನು ನಾಲೆಯಲ್ಲಿ ಮುಳುಗುತ್ತಿದ್ದುದ್ದನ್ನು ಕಂಡ ಪತಿ ಮಹಮ್ಮದ್ ಕಪೀಲ್ ಕೂಡ ಇಬ್ಬರನ್ನು ರಕ್ಷಿಸಲು ಮುಂದಾದಾಗ ತಾವೂ ಮುಳುಗಿ ಸಾವನ್ನಪ್ಪಿದ್ದಾರೆ.
ಕೂಡಲೇ ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…