ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ ಕಪೀಲ್(42) ಮೃತ ದುರ್ದೈವಿಗಳು. ಇವರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ಸರಗೂರಿನ ತಮ್ಮ ಅಜ್ಜಿಯ ತಿಥಿಕಾರ್ಯ ಮುಗಿಸಿ, ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದಾಗ ಆಯತಪ್ಪಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಾಲು ಜಾರಿ ನಾಲೆಯೊಳಗೆ ಬಿದ್ದ ಶಾಹೀರಾ ಭಾನು ಅವರನ್ನು ತಾಯಿ ಶಾವರ ಬಾನು ರಕ್ಷಿಸಲು ಮುಂದಾಗಿದ್ದಾರೆ. ಆಗ ಶಾವರ ಬಾನು ನಾಲೆಯಲ್ಲಿ ಮುಳುಗುತ್ತಿದ್ದುದ್ದನ್ನು ಕಂಡ ಪತಿ ಮಹಮ್ಮದ್ ಕಪೀಲ್ ಕೂಡ ಇಬ್ಬರನ್ನು ರಕ್ಷಿಸಲು ಮುಂದಾದಾಗ ತಾವೂ ಮುಳುಗಿ ಸಾವನ್ನಪ್ಪಿದ್ದಾರೆ.
ಕೂಡಲೇ ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…