ಮೈಸೂರು

ಒಂದೇ ರಾತ್ರಿ ಮೂರು ಅಂಗಡಿಗಳಿಗೆ ಖನ್ನ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳರು…!

ಅಪ್ರಾಪ್ತ ಸೇರಿ ಮೂವರು ಅಂದರ್…ಮಾರಕಾಸ್ತ್ರಗಳು ವಶ…ಶೋಕಿಗಾಗಿ ಕಳ್ಳತನ ಮಾರ್ಗ…!!

ನಂಜನಗೂಡು : ಒಂದೇ ರಾತ್ರಿಯಲ್ಲಿ ಮೂರು ಅಂಗಡಿಗಳಿಗೆ ಕನ್ನ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರ ಪೈಕಿ ಓರ್ವ ಅಪ್ರಾಪ್ತ ಸೆರೆಯಾಗಿದ್ದಾನೆ. ಬಂಧಿತರ ಬಳಿ ಮಾರಕಾಸ್ತ್ರಗಳು ದೊರೆತಿದೆ. ಗ್ರಾಮಸ್ಥರು ನೀಡಿದ ಮಾಹಿತಿ ಪೊಲೀಸರಿಗೆ ನೆರವಾಗಿದೆ.

ಇದನ್ನು ಓದಿ: ಮೈಸೂರು | ಕಾರಿನ ಗಾಜು ಒಡೆದು 48 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು ; ದೂರು ದಾಖಲು

ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ತಡರಾತ್ರಿ ಬಸ್ ನಿಲ್ದಾಣದ ಸಮೀಪವೇ ಇರುವ ದಿನಸಿ ಅಂಗಡಿ ಕಬ್ಬಿಣದ ಅಂಗಡಿ ಹಾಗೂ ಗ್ರಾಮದ ವರವಲಯದಲ್ಲಿರುವ ಮದ್ಯದ ಅಂಗಡಿ ಬೀಗ ಮುರಿದ ಖದೀಮರು ಕಳ್ಳತನ ಮಾಡಿದ್ದಾರೆ. ದಿನಸಿ ಅಂಗಡಿಯಲ್ಲಿ ಎಪ್ಪತ್ತು ಸಾವಿರ ನಗದು. ಕಬ್ಬಿಣದ ಅಂಗಡಿ ಬೀಗ ಮುರಿದರೂ ಹಣ ದೊರೆತಿಲ್ಲ. ಮದ್ಯದ ಅಂಗಡಿ ಬೀಗ ಮುರಿಯುತ್ತಿದ್ದ ವೇಳೆ ಬಾರಿ ಶಬ್ದ ಬಂದ ಕಾರಣ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲರ್ಟ್ ಆದಾ ಹುಲ್ಲಹಳ್ಳಿ ಠಾಣೆ ಪಿಎಸ್ಐ ಚೇತನ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಗ್ರಾಮಸ್ಥರ ನೆರವಿನಿಂದ ಸುತ್ತುವರೆದು ಮೂರು ಖದೀಮರನ್ನು ಸೆರೆ ಹಿಡಿದಿದ್ದಾರೆ. ಮಾರಕಸ್ತ್ರಗಳ ಮೂಲಕ ಬೆದರಿಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಪಿಎಸ್ಐ ಚೇತನ್ ಕುಮಾರ್ ಮತ್ತೆ ಸಿಬ್ಬಂದಿಗಳು ರೈತರ ಜೊತೆಗೂಡಿ ಬೆನ್ನತ್ತಿ ಮೂವರು ಖದೀಮರನ್ನು ಸೆರೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರತಾಪ್( 21) ಮಹಾಲಿಂಗ (35) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಸೇರಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಶೋಕಿಗಾಗಿ ಕಳ್ಳತನದ ಮಾರ್ಗ ಹಿಡಿದಿರುವುದು ವಿಚಾರಣೆ ವೇಳೆ ಬಯಲಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 mins ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

28 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

2 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

7 hours ago