ಮೈಸೂರು

ಒಂದೇ ರಾತ್ರಿ ಮೂರು ಅಂಗಡಿಗಳಿಗೆ ಖನ್ನ…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳರು…!

ಅಪ್ರಾಪ್ತ ಸೇರಿ ಮೂವರು ಅಂದರ್…ಮಾರಕಾಸ್ತ್ರಗಳು ವಶ…ಶೋಕಿಗಾಗಿ ಕಳ್ಳತನ ಮಾರ್ಗ…!!

ನಂಜನಗೂಡು : ಒಂದೇ ರಾತ್ರಿಯಲ್ಲಿ ಮೂರು ಅಂಗಡಿಗಳಿಗೆ ಕನ್ನ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರ ಪೈಕಿ ಓರ್ವ ಅಪ್ರಾಪ್ತ ಸೆರೆಯಾಗಿದ್ದಾನೆ. ಬಂಧಿತರ ಬಳಿ ಮಾರಕಾಸ್ತ್ರಗಳು ದೊರೆತಿದೆ. ಗ್ರಾಮಸ್ಥರು ನೀಡಿದ ಮಾಹಿತಿ ಪೊಲೀಸರಿಗೆ ನೆರವಾಗಿದೆ.

ಇದನ್ನು ಓದಿ: ಮೈಸೂರು | ಕಾರಿನ ಗಾಜು ಒಡೆದು 48 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು ; ದೂರು ದಾಖಲು

ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ತಡರಾತ್ರಿ ಬಸ್ ನಿಲ್ದಾಣದ ಸಮೀಪವೇ ಇರುವ ದಿನಸಿ ಅಂಗಡಿ ಕಬ್ಬಿಣದ ಅಂಗಡಿ ಹಾಗೂ ಗ್ರಾಮದ ವರವಲಯದಲ್ಲಿರುವ ಮದ್ಯದ ಅಂಗಡಿ ಬೀಗ ಮುರಿದ ಖದೀಮರು ಕಳ್ಳತನ ಮಾಡಿದ್ದಾರೆ. ದಿನಸಿ ಅಂಗಡಿಯಲ್ಲಿ ಎಪ್ಪತ್ತು ಸಾವಿರ ನಗದು. ಕಬ್ಬಿಣದ ಅಂಗಡಿ ಬೀಗ ಮುರಿದರೂ ಹಣ ದೊರೆತಿಲ್ಲ. ಮದ್ಯದ ಅಂಗಡಿ ಬೀಗ ಮುರಿಯುತ್ತಿದ್ದ ವೇಳೆ ಬಾರಿ ಶಬ್ದ ಬಂದ ಕಾರಣ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲರ್ಟ್ ಆದಾ ಹುಲ್ಲಹಳ್ಳಿ ಠಾಣೆ ಪಿಎಸ್ಐ ಚೇತನ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಗ್ರಾಮಸ್ಥರ ನೆರವಿನಿಂದ ಸುತ್ತುವರೆದು ಮೂರು ಖದೀಮರನ್ನು ಸೆರೆ ಹಿಡಿದಿದ್ದಾರೆ. ಮಾರಕಸ್ತ್ರಗಳ ಮೂಲಕ ಬೆದರಿಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಪಿಎಸ್ಐ ಚೇತನ್ ಕುಮಾರ್ ಮತ್ತೆ ಸಿಬ್ಬಂದಿಗಳು ರೈತರ ಜೊತೆಗೂಡಿ ಬೆನ್ನತ್ತಿ ಮೂವರು ಖದೀಮರನ್ನು ಸೆರೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರತಾಪ್( 21) ಮಹಾಲಿಂಗ (35) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಸೇರಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಶೋಕಿಗಾಗಿ ಕಳ್ಳತನದ ಮಾರ್ಗ ಹಿಡಿದಿರುವುದು ವಿಚಾರಣೆ ವೇಳೆ ಬಯಲಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago