ಮೈಸೂರು: ರಾಜ್ಯ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತಿಯ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ನಗರ ಉತ್ತರ ವಲಯದ ಕುಂಬಾರ ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ನೂತನ ಕೊಠಡಿಗಳನ್ನು ಶಾಸಕ ಹರೀಶ್ ಗೌಡ ಅವರು ಉದ್ಘಾಟಿಸಿದರು.
ಸೋಮವಾರ (ಆ.19) ರಾಜ್ಯ ಸರ್ಕಾರದ ವಿವೇಕ ಶಾಲಾ ಯೋಜನೆಯ ಅಂದಾಜು ಮೊತ್ತ 45ಲಕ್ಷ ಮೊತ್ತದಲ್ಲಿ ಆಗಿರುವ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ನನ್ನ ಕ್ಷೇತ್ರದಲ್ಲಿ ಅತಿಹೆಚ್ಚು ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿವೆ. ಅವುಗಳಿಗೆ ಹೆಚ್ಚಿನ ದಾಖಲಾತಿ ಆಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಕಲ್ಪಿಸಲು ಸರ್ಕಾರ ಹಾಗೂ ಸಿ.ಎಸ್.ಆರ್ ಅನುದಾನಕ್ಕೆ ಸೂಕ್ತ ರೂಪುರೇಷೆ ಸಿದ್ದಪಡಿಸಿ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ಮುಖ್ಯ ಶಿಕ್ಷಕರು ಬಳಸಿಕೊಂಡು ಬಡಜನರು ಖಾಸಗಿ ಶಿಕ್ಷಣ ಸಂಸ್ಥೆಗಳ ಮೊರೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಜತೆಗೆ ಇಂದಿನಿ ಸ್ಪರ್ಧಾತ್ಮಕ ಶಿಕ್ಷಣದಲ್ಲಿಯೂ ಪೈಪೋಟಿ ನೀಡುವ ಶಿಕ್ಷಣ ಸವಾಲು ಅರಿತುಕೊಳ್ಳಬೇಕು. ಈ ದಿಸೆಯಲ್ಲಿ ಈ ಶಾಲೆಯೂ ಮುಂದುವರೆಯಬೇಕೆಂದು ಆಶಿಸುತ್ತೇನೆಂದರು.
ಇದೇ ವೇಳೆ ಒಂದು ವರ್ಷಗಳ ಕಾಲ ಸ್ಮಾರ್ಟ್ ಕ್ಲಾಸ್ ತರಗತಿ ನಡೆಸಲು ಬೇಕಾಗುವ ಉಚಿತ ಇಂಟರ್ನೆಟ್ ಸೌಲಭ್ಯವನ್ನು ಶಾಸಕರು ವೈಯುಕ್ತಿಕವಾಗಿ ಭರಿಸಿಕೊಟ್ಟಿರುವುದಕ್ಕೆ ಶಾಲಾ ಮುಖ್ಯೋಪಾಧ್ಯರು ಹಾಗೂ ಶಿಕ್ಷಕರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ಸದರಿ ಕಾರ್ಯಕ್ರಮದಲ್ಲಿ ಬಿ.ಇ.ಓ, ಸಿ.ಡಿ.ಪಿ.ಓ., ಪಿ.ಆರ್.ಇ.ಡಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕುಂಬಾರುಕೊಪ್ಪಲು ಗ್ರಾಮದ ಮುಖಂಡರು, ಪೋಷಕರು ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…