ಮೈಸೂರು

ಇನ್ಮುಂದೆ ಎಲ್ಲೆಂದರಲ್ಲಿ ಕಟ್ಟಡದ ತ್ಯಾಜ್ಯ ಎಸೆದರೆ ಬೀಳುತ್ತೆ ಭಾರಿ ಮೊತ್ತದ ದಂಡ!

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಗುರುತಿಸಲಾಗಿದೆ.

ಮುಂದೆನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದ್ದು, ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

15 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago