ಮೈಸೂರು

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ವೀಕ್ಷಣೆಗೆ ಶುಲ್ಕ ನಿಗದಿಪಡಿಸಲು ಮುಂದಾಗಿ ಸಚಿವರ ವಾರ್ನಿಂಗ್‌ಗೆ ಹೆದರಿ ಕೈ ಬಿಟ್ಟಿದ್ದಾರೆ.

ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಏಕಾಏಕೀ ವೀಕ್ಷಣೆಗೆ ಶುಲ್ಕ ನಿಗದಿಪಡಿಸಿದ್ದರು. ಇದರಿಂದ ಪಿಸಿಸಿಎಫ್ ಕುಮಾರ್ ಪುಷ್ಕರ್ ಅವರು ಚಾಟಿಬೀಸಿದ್ದಾರೆ. ದಸರಾ ಗಜಪಡೆಯನ್ನು ವೀಕ್ಷಿಸಲು ಶುಲ್ಕ ನಿಗದಿಪಡಿಸಿರುವ ವಿಷಯ ಮಾಧ್ಯಮಗಳಲ್ಲಿ ಪ್ರಕಟಗೊಂಡು ತೀವ್ರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರವೇಶ ಶುಲ್ಕವನ್ನು ರದ್ದು ಮಾಡಿದೆ.‌

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಸಲಹೆ ಮೇರೆಗೆ ಅರಣ್ಯ ಇಲಾಖೆ ಗಜಪಡೆಯ ದರ್ಶನಕ್ಕೆ ಟಿಕೆಟ್ ವ್ಯವಸ್ಥೆ ಜಾರಿ ಮಾಡಿತ್ತು ಎನ್ನಲಾಗಿದೆ. ಜನರ ವಿರೋಧದಿಂದ ಎಚ್ಚೆತ್ತು, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಬಳಿಕ ಅದನ್ನು ತಕ್ಷಣವೇ ರದ್ದುಪಡಿಸಲಾಗಿದೆ. ಅರಮನೆ ಅಂಗಳದಲ್ಲಿ ಆನೆಗಳ ವೀಕ್ಷಣೆಗೆ ಬರುವ ಸಾರ್ವಜನಿಕರಿಂದ ಇದೇ ಮೊದಲ ಬಾರಿಗೆ ವಯಸ್ಕರಿಗೆ ೧೦೦ ರೂ., ಮಕ್ಕಳಿಗೆ ೫೦ ರೂ., ನಿಗದಿ ಮಾಡಲಾಗಿತ್ತು.

ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಇಚ್ಛಿಸಿದ್ದಲ್ಲಿ ದಸರಾ ಆನೆಗಳನ್ನು ವೀಕ್ಷಿಸಲು ಅರಣ್ಯ ಇಲಾಖೆ ವತಿಯಿಂದ ಇ-ಟೆಕೆಟಿಂಗ್ ಸೌಲಭ್ಯವನ್ನು ನೀಡಲಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ಕಂಡು ಬಂದಿದ್ದು, ಈ ವಿಷಯವು ಕೇವಲ ಚಿಂತನಾ ಹಂತದಲ್ಲಿತ್ತು. ಆದರೆ, ಆನೆಗಳ ವೀಕ್ಷಣೆಗೆ ಟಿಕೆಟ್ ವ್ಯವಸ್ಥೆ ಇಲ್ಲ ಎಂದು ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

17 mins ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

1 hour ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

10 hours ago