ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ.
ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ ಹುಲಿ ದಾಳಿ ನಡೆಸಿದ್ದು, ಗ್ರಾಮಸ್ಥರು ತೀವ್ರ ಭಯಭೀತರಾಗಿದ್ದಾರೆ. ಗ್ರಾಮದ ಮಗ್ಗೆ ಮರಳಿ ದೇವಸ್ಥಾನದ ಮುಂಭಾಗವಿದ್ದ ಬಸವನ ಮೇಲೆ ದಾಳಿ ನಡೆಸಿರುವ ಹುಲಿ ಅರ್ಧ ಭಾಗವನ್ನು ತಿಂದು ತೇಗಿದೆ.
ಇದನ್ನು ಓದಿ: ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ
ಸಾವನ್ನಪ್ಪಿದ ಬಸವನ ಮುಂದೆ ಜನರು ಕಣ್ಣೀರಾಕಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದು, ಅನವಶ್ಯಕವಾಗಿ ಹೊರಗೆ ಬರದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…