ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ವ್ಯಾಘ್ರನ ಅಟ್ಟಹಾಸ

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ.

ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ ಹುಲಿ ದಾಳಿ ನಡೆಸಿದ್ದು, ಗ್ರಾಮಸ್ಥರು ತೀವ್ರ ಭಯಭೀತರಾಗಿದ್ದಾರೆ. ಗ್ರಾಮದ ಮಗ್ಗೆ ಮರಳಿ ದೇವಸ್ಥಾನದ ಮುಂಭಾಗವಿದ್ದ ಬಸವನ ಮೇಲೆ ದಾಳಿ ನಡೆಸಿರುವ ಹುಲಿ ಅರ್ಧ ಭಾಗವನ್ನು ತಿಂದು ತೇಗಿದೆ.

ಇದನ್ನು ಓದಿ: ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ

ಸಾವನ್ನಪ್ಪಿದ ಬಸವನ ಮುಂದೆ ಜನರು ಕಣ್ಣೀರಾಕಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದು, ಅನವಶ್ಯಕವಾಗಿ ಹೊರಗೆ ಬರದಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago