ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾನು ಬಂದು ಅರ್ಧ ಗಂಟೆ ಆದ್ರೂ ನೀವು ಬಂದಿಲ್ಲ ಕಾರಣ ಏನು..? ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಸಭೆ ನಡೆಸೋಣವೆಂದರೆ ನೀವೇ ಬಂದಿಲ್ಲ. ಇದಕ್ಕೆ ಕಾರಣವಾದ್ರೂ ಏನು ಎಂದು ಶಾಸಕರು ತಮ್ಮ ಅಸಹಾಯಕತೆ ತೋರಿಸಿಕೊಂಡಿದ್ದಾರೆ.
ಇದನ್ನು ಓದಿ: ಸರಗೂರು| ಹುಲಿ ದಾಳಿಗೆ ವ್ಯಕ್ತಿ ಬಲಿ
ಪರಿಹಾರ ನೀಡುವ ಬಗ್ಗೆ ಅಧಿಕಾರಿ ತಿಳಿಸಿದಾಗ ಅನಿಲ್ ಚಿಕ್ಕಮಾದು ಮೃದುವಾಗೇ ಅಧಿಕಾರಿಗೆ ಕ್ಲಾಸ್ ತಗೊಂಡಿದ್ದಾರೆ. ಕಳೆದ ವಾರ ಹುಲಿ ಹೆಜ್ಜೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ರೂ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಶಾಸಕರ ಯಾವೊಂದು ಪ್ರಶ್ನೆಗೂ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅಧಿಕಾರಿಯಿಂದ ಸಮರ್ಪಕ ಉತ್ತರ ದೊರೆಯಲಿಲ್ಲ. ಜನಪ್ರತಿನಿಧಿಯ ಪರಿಸ್ಥಿತಿಯೇ ಹೀಗಾದ್ರೆ ಸಾಮಾನ್ಯ ರೈತನ ಪಾಡೇನು.?
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…