ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ ಅರ್ಧ ತಿಂದು ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾಗ ಹುಲಿ ರೈತನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಮೃತ ರೈತ ಗಣೇಶನಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್ರ ಶವ ಪತ್ತೆಯಾಗಿದೆ.
ಇನ್ನು ಸೆಪ್ಟೆಂಬರ್ 21ರಂದು ಇದೇ ಅರಣ್ಯ ವ್ಯಾಪ್ತಿಯಲ್ಲಿ ಮುದ್ದನಹಳ್ಳಿಯ ರಮೇಶ್ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಘಟನೆಯಲ್ಲಿ ತೀವ್ರಗಾಯಗೊಂಡ ರಮೇಶ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ದಾಳಿ ಮಾಡಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿ ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…