ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ ಅರ್ಧ ತಿಂದು ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾಗ ಹುಲಿ ರೈತನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಮೃತ ರೈತ ಗಣೇಶನಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್ರ ಶವ ಪತ್ತೆಯಾಗಿದೆ.
ಇನ್ನು ಸೆಪ್ಟೆಂಬರ್ 21ರಂದು ಇದೇ ಅರಣ್ಯ ವ್ಯಾಪ್ತಿಯಲ್ಲಿ ಮುದ್ದನಹಳ್ಳಿಯ ರಮೇಶ್ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಘಟನೆಯಲ್ಲಿ ತೀವ್ರಗಾಯಗೊಂಡ ರಮೇಶ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ದಾಳಿ ಮಾಡಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿ ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…