ಮೈಸೂರು

ಹಸು ಮೇಯಿಸುವಾಗ ಹುಲಿ ದಾಳಿ : ರೈತ ಸಾವು

ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ ಅರ್ಧ ತಿಂದು ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾಗ ಹುಲಿ ರೈತನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಮೃತ ರೈತ ಗಣೇಶನಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್‌ರ ಶವ ಪತ್ತೆಯಾಗಿದೆ.

ಇನ್ನು ಸೆಪ್ಟೆಂಬರ್ 21ರಂದು ಇದೇ ಅರಣ್ಯ ವ್ಯಾಪ್ತಿಯಲ್ಲಿ ಮುದ್ದನಹಳ್ಳಿಯ ರಮೇಶ್ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಘಟನೆಯಲ್ಲಿ ತೀವ್ರಗಾಯಗೊಂಡ ರಮೇಶ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ದಾಳಿ ಮಾಡಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿ ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

 

lokesh

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

2 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

6 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

11 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

11 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

11 hours ago