ಮೈಸೂರು

ಹಸು ಮೇಯಿಸುವಾಗ ಹುಲಿ ದಾಳಿ : ರೈತ ಸಾವು

ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ ಅರ್ಧ ತಿಂದು ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾಗ ಹುಲಿ ರೈತನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಮೃತ ರೈತ ಗಣೇಶನಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್‌ರ ಶವ ಪತ್ತೆಯಾಗಿದೆ.

ಇನ್ನು ಸೆಪ್ಟೆಂಬರ್ 21ರಂದು ಇದೇ ಅರಣ್ಯ ವ್ಯಾಪ್ತಿಯಲ್ಲಿ ಮುದ್ದನಹಳ್ಳಿಯ ರಮೇಶ್ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಘಟನೆಯಲ್ಲಿ ತೀವ್ರಗಾಯಗೊಂಡ ರಮೇಶ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಡಂಚಿನಲ್ಲಿ ಗ್ರಾಮದ ಹೊರಾವರಣದಲ್ಲಿ ದನ ಮೇಯಿಸಲು ಹೋಗಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿದ ದೃಶ್ಯ ಕಂಡು ರಕ್ಷಿಸಲು ಹೋದ ರೈತನ ಮೇಲೆ ಹುಲಿ ದಾಳಿ ಮಾಡಿತ್ತು. ರಮೇಶ್ ಜೋರಾಗಿ ಕಿರುಚಾಡಿದಾಗ, ಅಕ್ಕಪಕ್ಕದಲ್ಲಿ ದನ ಮೇಯಿಸುತ್ತಿದ್ದ ದನಗಾಹಿಗಳು ಹೋಗಿ ಹುಲಿ ಓಡಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

 

lokesh

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago