ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.
ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ ಹುಲಿಯು ಮತ್ತೂಂದು ಗಂಡು ಹುಲಿಯ ಜೊತೆ ಕಾದಾಟ ನಡೆಸಿ ತೀವ್ರ ಗಾಯಗೊಂಡಿತ್ತು. ಈ ಹುಲಿಯು ಮೂರ್ನಾಲ್ಕು ದಿನಗಳ ಹಿಂದೆ ಕುಟ್ಟ-ಪೊನ್ನಂಪೇಟೆ ಮುಖ್ಯ ರಸ್ತೆ ಮಧ್ಯದಲ್ಲೇ ಕುಳಿತು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿತ್ತು.
ನಾಗರಹೊಳೆ ಡಿಸಿಎಫ್ ಸೀಮಾ ಪಿ.ಎ.ರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ ಕೆ.ಪಿ.ರಂಜನ್ರವರು ಅರವಳಿಕೆ ಚುಚ್ಚುಮದ್ದು ನೀಡಿದರು. ಬಳಿಕ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳಾದ ಡಾ.ಎಚ್.ರಮೇಶ್, ಡಾ.ವಾಸಿಂ ಮಿರ್ಜಾರವರು ನಿತ್ರಾಣಗೊಂಡಿದ್ದ ಹುಲಿಯ ಮೈಮೇಲೆ ಆಗಿದ್ದ ಗಾಯಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾಹನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ಮಾಹಿತಿ ನೀಡಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…