ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.
ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ ಹುಲಿಯು ಮತ್ತೂಂದು ಗಂಡು ಹುಲಿಯ ಜೊತೆ ಕಾದಾಟ ನಡೆಸಿ ತೀವ್ರ ಗಾಯಗೊಂಡಿತ್ತು. ಈ ಹುಲಿಯು ಮೂರ್ನಾಲ್ಕು ದಿನಗಳ ಹಿಂದೆ ಕುಟ್ಟ-ಪೊನ್ನಂಪೇಟೆ ಮುಖ್ಯ ರಸ್ತೆ ಮಧ್ಯದಲ್ಲೇ ಕುಳಿತು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿತ್ತು.
ನಾಗರಹೊಳೆ ಡಿಸಿಎಫ್ ಸೀಮಾ ಪಿ.ಎ.ರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ ಕೆ.ಪಿ.ರಂಜನ್ರವರು ಅರವಳಿಕೆ ಚುಚ್ಚುಮದ್ದು ನೀಡಿದರು. ಬಳಿಕ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳಾದ ಡಾ.ಎಚ್.ರಮೇಶ್, ಡಾ.ವಾಸಿಂ ಮಿರ್ಜಾರವರು ನಿತ್ರಾಣಗೊಂಡಿದ್ದ ಹುಲಿಯ ಮೈಮೇಲೆ ಆಗಿದ್ದ ಗಾಯಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾಹನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ಮಾಹಿತಿ ನೀಡಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…