ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.
ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ ಹುಲಿಯು ಮತ್ತೂಂದು ಗಂಡು ಹುಲಿಯ ಜೊತೆ ಕಾದಾಟ ನಡೆಸಿ ತೀವ್ರ ಗಾಯಗೊಂಡಿತ್ತು. ಈ ಹುಲಿಯು ಮೂರ್ನಾಲ್ಕು ದಿನಗಳ ಹಿಂದೆ ಕುಟ್ಟ-ಪೊನ್ನಂಪೇಟೆ ಮುಖ್ಯ ರಸ್ತೆ ಮಧ್ಯದಲ್ಲೇ ಕುಳಿತು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿತ್ತು.
ನಾಗರಹೊಳೆ ಡಿಸಿಎಫ್ ಸೀಮಾ ಪಿ.ಎ.ರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ ಕೆ.ಪಿ.ರಂಜನ್ರವರು ಅರವಳಿಕೆ ಚುಚ್ಚುಮದ್ದು ನೀಡಿದರು. ಬಳಿಕ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳಾದ ಡಾ.ಎಚ್.ರಮೇಶ್, ಡಾ.ವಾಸಿಂ ಮಿರ್ಜಾರವರು ನಿತ್ರಾಣಗೊಂಡಿದ್ದ ಹುಲಿಯ ಮೈಮೇಲೆ ಆಗಿದ್ದ ಗಾಯಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾಹನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ಮಾಹಿತಿ ನೀಡಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…