ಮೈಸೂರು

ದನಗಾಹಿಗಳ ಕಣ್ಣೆದುರೇ ಹಸುವನ್ನು ಕೊಂದ ಹುಲಿ

ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ.

ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ ತಮ್ಮ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಬಂದು ಹಸುವಿನ ಕುತ್ತಿಗೆ ಭಾಗಕ್ಕೆ ದಾಳಿಯಿಟ್ಟು ಹಸುವಿನ ರಕ್ತ ಹೀರಿ ಸಾಯಿಸಿದೆ. ಹುಲಿ ಕಂಡು ಗಾಬರಿಗೊಂಡ ವೆಂಕಟೇಶ್ ಹಾಗೂ ಅಕ್ಕಪಕ್ಕದಲ್ಲಿ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿಗಳು ಗಾಬರಿಗೊಂಡು ಜೋರಾಗಿ ಕೂಗಾಟ ನಡೆಸಿದ್ದರಿಂದ ಗಾಬರಿಗೊಂಡ
ಹುಲಿಯು ಪಕ್ಕದ ಶೆಟ್ಟಹಳ್ಳಿ ಅರಣ್ಯದೊಳಗೆ ಸೇರಿಕೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಢಾಯಿಸಿ ಸುತ್ತಮುತ್ತ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿ, ಕುರಿಗಾಹಿಗಳನ್ನು ತಕ್ಷಣವೇ ಸ್ಥಳದಿಂದ ತೆರಳುವಂತೆ ಎಚ್ಚರಿಸಿ ಕಳುಹಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ವೆಂಕಟೇಶ್ ರವರಿಗೆ ಸೇರಿದ ತೆನೆ ಹಸುವನ್ನು ಹುಲಿ ದಾಳಿ ನಡೆಸಿ ಕೊಂದುಹಾಕಿತ್ತು.

ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಆಗಾಗ್ಗೆ ಹುಲಿ ದಾಳಿ ನಡೆಸಿ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ. ಕೂಡಲೇ ಬೋನು ಇಟ್ಟು ಹುಲಿ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago