ಮೈಸೂರು

ದನಗಾಹಿಗಳ ಕಣ್ಣೆದುರೇ ಹಸುವನ್ನು ಕೊಂದ ಹುಲಿ

ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ.

ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ ತಮ್ಮ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಬಂದು ಹಸುವಿನ ಕುತ್ತಿಗೆ ಭಾಗಕ್ಕೆ ದಾಳಿಯಿಟ್ಟು ಹಸುವಿನ ರಕ್ತ ಹೀರಿ ಸಾಯಿಸಿದೆ. ಹುಲಿ ಕಂಡು ಗಾಬರಿಗೊಂಡ ವೆಂಕಟೇಶ್ ಹಾಗೂ ಅಕ್ಕಪಕ್ಕದಲ್ಲಿ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿಗಳು ಗಾಬರಿಗೊಂಡು ಜೋರಾಗಿ ಕೂಗಾಟ ನಡೆಸಿದ್ದರಿಂದ ಗಾಬರಿಗೊಂಡ
ಹುಲಿಯು ಪಕ್ಕದ ಶೆಟ್ಟಹಳ್ಳಿ ಅರಣ್ಯದೊಳಗೆ ಸೇರಿಕೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಢಾಯಿಸಿ ಸುತ್ತಮುತ್ತ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿ, ಕುರಿಗಾಹಿಗಳನ್ನು ತಕ್ಷಣವೇ ಸ್ಥಳದಿಂದ ತೆರಳುವಂತೆ ಎಚ್ಚರಿಸಿ ಕಳುಹಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ವೆಂಕಟೇಶ್ ರವರಿಗೆ ಸೇರಿದ ತೆನೆ ಹಸುವನ್ನು ಹುಲಿ ದಾಳಿ ನಡೆಸಿ ಕೊಂದುಹಾಕಿತ್ತು.

ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಆಗಾಗ್ಗೆ ಹುಲಿ ದಾಳಿ ನಡೆಸಿ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ. ಕೂಡಲೇ ಬೋನು ಇಟ್ಟು ಹುಲಿ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

13 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago