ಮೈಸೂರು

ಹುಲಿ ಉಪಟಳ; ಗ್ರಾಮಸ್ಥರ ತಳಮಳ

ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ

ಶ್ರೀನಿವಾಸ ಟಿ.ಎಲ್.

ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ ಬಳಿಕ ಅವರ ಹಸುವಿನ ಮೇಲೆ ದಾಳಿ ಮಾಡಿರುವ ಹುಲಿ ಅದನ್ನು ಕೊಂದು ಮಾಂಸವನ್ನು ಭಕ್ಷಿಸಿದೆ.

ಹಾಡಹಗಲೇ ನಡೆದ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಳ್ಳೂರು ಹುಂಡಿಗೆ ಮಂಗಳವಾರ ಭೇಟಿ ನೀಡಿದ ” ಆಂದೋಲನʼ ತಂಡದೊಂದಿಗೆ ಮಾತನಾಡಿದ ಗ್ರಾಮಸ್ಥರು “” ಅರಣ್ಯ ಇಲಾಖೆ ನಮಗೆ ಬೇರೆ ಕಡೆ ಜಾಗ ನೀಡಲಿ. ನಾವು ಅಲ್ಲಿಗೆ ಹೋಗಿ ಬದುಕುತ್ತೇವೆ. ಇಲ್ಲಿ ನಮ್ಮ ಜೀವಕ್ಕೆ ರಕ್ಷಣೆಯಿಲ್ಲʼʼ ಎಂದು ಅಳಲು ತೋಡಿಕೊಂಡರು. ಹುಲಿಯು ಹಸು “ಪೂಜಾʼಳ ಕಾಲು ಮತ್ತು ತಲೆ ಭಾಗ ಬಿಟ್ಟು ಪೂರ್ಣವಾಗಿ ಕಬಳಿಸಿದ್ದು ಕಂಡುಬಂತು. ಅದರ ಎರಡು ತಿಂಗಳ ಗಂಡು ಕರು ಅನಾಥವಾಗಿದೆ.

ಹುಲಿ ದಾಳಿಗೆ ತುತ್ತಾಗಿರುವ ಸ್ವಾಮಿ ದಾಸಯ್ಯ ಖಾಸಗಿ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಇನ್ನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ” ಆಂದೋಲನ ಡಿಜಿಟಲ್‌ ʼ ಗೆ ದೃಢಪಡಿಸಿವೆ.

“” ತಿಂಗಳಿಗೆ ಮೂರ್ನಾಲ್ಕು ರಾಸುಗಳನ್ನು ಹುಲಿ ಕಬಳಿಸುತ್ತಾ ಬಂದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ನೀಡಿಲ್ಲ. ರೈತರು ಆನೆ, ಕಡವೆ,ಜಿಂಕೆ, ಚಿರತೆ,ಕಾಡುಹಂದಿ,ಮುಳ್ಳುಹಂದಿ,ನವಿಲುಗಳೂ ಹೊಲಕ್ಕೆ ಬಂದು ನಾವು ಬೆಳೆದ ಕೃಷಿಯನ್ನು ನಾಶಪಡಿಸುತ್ತಿವೆ. ಲಕ್ಷಗಟ್ಟಲೆ ಬೆಳೆನಾಶವಾದರೂ ಅರಣ್ಯ ಇಲಾಖೆ ಕೇವಲ ಎರಡು, ಮೂರು ಸಾವಿರ ರೂಪಾಯಿ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತಿದೆ. ನಮಗೆ ಪರಿಹಾರಕ್ಕಿಂತಲೂ ವನ್ಯಪ್ರಾಣಿ ಜನವಸತಿಯತ್ತ ಬರದಂತೆ ತಡೆಗಟ್ಟಲಿʼʼ ಎಂದು ಕೃಷಿಕರು ಅಳಲು ತೋಡಿಕೊಂಡರು.

“” ಗ್ರಾಮಸ್ಥರು ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡುತ್ತಿರುವುದು ಹುಲಿದಾಳಿಗೆ ಕಾರಣವಾಗುತ್ತಿದೆ. ಕೆಲವು ರೈತರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದ್ದು ದಾಖಲೆ ಇಲ್ಲದ ಜಾಗದಲ್ಲಿ ಫಸಲು ನಷ್ಟವಾದರೆ ಪರಿಹಾರ ಅಸಾಧ್ಯ. ಈವರೆಗೆ ಸಾಧ್ಯವಾದಷ್ಟೂ ಶೀಘ್ರ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರ ವಿತರಣೆ ಪ್ರಗತಿಯಲ್ಲಿದೆ. ಸ್ವಾಮಿ ದಾಸಯ್ಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಿಸಲಾಗುವುದು. ಅವರ ಆಸ್ಪತ್ರೆ ಖರ್ಚನ್ನು ಅರಣ್ಯ ಇಲಾಖೆ ಭರಿಸಲಿದೆ.ʼʼ ಎಂದು ಆರ್‌ ಎಫ್‌ ಒ ಕೆ.ಆರ್.ನಾರಾಯಣ ಆಂದೋಲನ ಡಿಜಿಟಲ್‌ ಗೆ ಮಾಹಿತಿ ನೀಡಿದ್ದಾರೆ.

10 ಮಂದಿ ಅರಣ್ಯ ಸಿಬ್ಬಂದಿಯ ತಂಡ ಮಂಗಳವಾರದಿಂದಲೇ ಹುಲಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ. ಬುಧವಾರದಿಂದ ಹುಲಿಯ ಚಲನ ವಲನ ವೀಕ್ಷಣೆಗೆ ಡ್ರೋಣ್ ಬಳಸಿಕೊಳ್ಳಲಾಗುವುದು. ಹುಲಿಯನ್ನು ಸೆರೆ ಹಿಡಿಯಲು ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಅನುಮತಿ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

2 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

2 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

2 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

3 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

3 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

3 hours ago