ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ
ಶ್ರೀನಿವಾಸ ಟಿ.ಎಲ್.
ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ ಬಳಿಕ ಅವರ ಹಸುವಿನ ಮೇಲೆ ದಾಳಿ ಮಾಡಿರುವ ಹುಲಿ ಅದನ್ನು ಕೊಂದು ಮಾಂಸವನ್ನು ಭಕ್ಷಿಸಿದೆ.
ಹಾಡಹಗಲೇ ನಡೆದ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಳ್ಳೂರು ಹುಂಡಿಗೆ ಮಂಗಳವಾರ ಭೇಟಿ ನೀಡಿದ ” ಆಂದೋಲನʼ ತಂಡದೊಂದಿಗೆ ಮಾತನಾಡಿದ ಗ್ರಾಮಸ್ಥರು “” ಅರಣ್ಯ ಇಲಾಖೆ ನಮಗೆ ಬೇರೆ ಕಡೆ ಜಾಗ ನೀಡಲಿ. ನಾವು ಅಲ್ಲಿಗೆ ಹೋಗಿ ಬದುಕುತ್ತೇವೆ. ಇಲ್ಲಿ ನಮ್ಮ ಜೀವಕ್ಕೆ ರಕ್ಷಣೆಯಿಲ್ಲʼʼ ಎಂದು ಅಳಲು ತೋಡಿಕೊಂಡರು. ಹುಲಿಯು ಹಸು “ಪೂಜಾʼಳ ಕಾಲು ಮತ್ತು ತಲೆ ಭಾಗ ಬಿಟ್ಟು ಪೂರ್ಣವಾಗಿ ಕಬಳಿಸಿದ್ದು ಕಂಡುಬಂತು. ಅದರ ಎರಡು ತಿಂಗಳ ಗಂಡು ಕರು ಅನಾಥವಾಗಿದೆ.
ಹುಲಿ ದಾಳಿಗೆ ತುತ್ತಾಗಿರುವ ಸ್ವಾಮಿ ದಾಸಯ್ಯ ಖಾಸಗಿ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಇನ್ನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ” ಆಂದೋಲನ ಡಿಜಿಟಲ್ ʼ ಗೆ ದೃಢಪಡಿಸಿವೆ.
“” ತಿಂಗಳಿಗೆ ಮೂರ್ನಾಲ್ಕು ರಾಸುಗಳನ್ನು ಹುಲಿ ಕಬಳಿಸುತ್ತಾ ಬಂದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ನೀಡಿಲ್ಲ. ರೈತರು ಆನೆ, ಕಡವೆ,ಜಿಂಕೆ, ಚಿರತೆ,ಕಾಡುಹಂದಿ,ಮುಳ್ಳುಹಂದಿ,ನವಿಲುಗಳೂ ಹೊಲಕ್ಕೆ ಬಂದು ನಾವು ಬೆಳೆದ ಕೃಷಿಯನ್ನು ನಾಶಪಡಿಸುತ್ತಿವೆ. ಲಕ್ಷಗಟ್ಟಲೆ ಬೆಳೆನಾಶವಾದರೂ ಅರಣ್ಯ ಇಲಾಖೆ ಕೇವಲ ಎರಡು, ಮೂರು ಸಾವಿರ ರೂಪಾಯಿ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತಿದೆ. ನಮಗೆ ಪರಿಹಾರಕ್ಕಿಂತಲೂ ವನ್ಯಪ್ರಾಣಿ ಜನವಸತಿಯತ್ತ ಬರದಂತೆ ತಡೆಗಟ್ಟಲಿʼʼ ಎಂದು ಕೃಷಿಕರು ಅಳಲು ತೋಡಿಕೊಂಡರು.
“” ಗ್ರಾಮಸ್ಥರು ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡುತ್ತಿರುವುದು ಹುಲಿದಾಳಿಗೆ ಕಾರಣವಾಗುತ್ತಿದೆ. ಕೆಲವು ರೈತರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದ್ದು ದಾಖಲೆ ಇಲ್ಲದ ಜಾಗದಲ್ಲಿ ಫಸಲು ನಷ್ಟವಾದರೆ ಪರಿಹಾರ ಅಸಾಧ್ಯ. ಈವರೆಗೆ ಸಾಧ್ಯವಾದಷ್ಟೂ ಶೀಘ್ರ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರ ವಿತರಣೆ ಪ್ರಗತಿಯಲ್ಲಿದೆ. ಸ್ವಾಮಿ ದಾಸಯ್ಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಿಸಲಾಗುವುದು. ಅವರ ಆಸ್ಪತ್ರೆ ಖರ್ಚನ್ನು ಅರಣ್ಯ ಇಲಾಖೆ ಭರಿಸಲಿದೆ.ʼʼ ಎಂದು ಆರ್ ಎಫ್ ಒ ಕೆ.ಆರ್.ನಾರಾಯಣ ಆಂದೋಲನ ಡಿಜಿಟಲ್ ಗೆ ಮಾಹಿತಿ ನೀಡಿದ್ದಾರೆ.
10 ಮಂದಿ ಅರಣ್ಯ ಸಿಬ್ಬಂದಿಯ ತಂಡ ಮಂಗಳವಾರದಿಂದಲೇ ಹುಲಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ. ಬುಧವಾರದಿಂದ ಹುಲಿಯ ಚಲನ ವಲನ ವೀಕ್ಷಣೆಗೆ ಡ್ರೋಣ್ ಬಳಸಿಕೊಳ್ಳಲಾಗುವುದು. ಹುಲಿಯನ್ನು ಸೆರೆ ಹಿಡಿಯಲು ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಅನುಮತಿ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…