ಮೈಸೂರು

ಹುಲಿ ಉಪಟಳ; ಗ್ರಾಮಸ್ಥರ ತಳಮಳ

ಬಳ್ಳೂರಹುಂಡಿ ಗ್ರಾಮಸ್ಥರಿಗೆ ಪರಿಹಾರ ಮರೀಚಿಕೆ

ಶ್ರೀನಿವಾಸ ಟಿ.ಎಲ್.

ಮೈಸೂರು: ಹುಲಿ ದಾಳಿಯಿಂದ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿಯ ದನಗಾಹಿ ಸ್ವಾಮಿ ದಾಸಯ್ಯ (೫೪) ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸ್ವಾಮಿ ಮೇಲಿನ ದಾಳಿ ಬಳಿಕ ಅವರ ಹಸುವಿನ ಮೇಲೆ ದಾಳಿ ಮಾಡಿರುವ ಹುಲಿ ಅದನ್ನು ಕೊಂದು ಮಾಂಸವನ್ನು ಭಕ್ಷಿಸಿದೆ.

ಹಾಡಹಗಲೇ ನಡೆದ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಳ್ಳೂರು ಹುಂಡಿಗೆ ಮಂಗಳವಾರ ಭೇಟಿ ನೀಡಿದ ” ಆಂದೋಲನʼ ತಂಡದೊಂದಿಗೆ ಮಾತನಾಡಿದ ಗ್ರಾಮಸ್ಥರು “” ಅರಣ್ಯ ಇಲಾಖೆ ನಮಗೆ ಬೇರೆ ಕಡೆ ಜಾಗ ನೀಡಲಿ. ನಾವು ಅಲ್ಲಿಗೆ ಹೋಗಿ ಬದುಕುತ್ತೇವೆ. ಇಲ್ಲಿ ನಮ್ಮ ಜೀವಕ್ಕೆ ರಕ್ಷಣೆಯಿಲ್ಲʼʼ ಎಂದು ಅಳಲು ತೋಡಿಕೊಂಡರು. ಹುಲಿಯು ಹಸು “ಪೂಜಾʼಳ ಕಾಲು ಮತ್ತು ತಲೆ ಭಾಗ ಬಿಟ್ಟು ಪೂರ್ಣವಾಗಿ ಕಬಳಿಸಿದ್ದು ಕಂಡುಬಂತು. ಅದರ ಎರಡು ತಿಂಗಳ ಗಂಡು ಕರು ಅನಾಥವಾಗಿದೆ.

ಹುಲಿ ದಾಳಿಗೆ ತುತ್ತಾಗಿರುವ ಸ್ವಾಮಿ ದಾಸಯ್ಯ ಖಾಸಗಿ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಇನ್ನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ” ಆಂದೋಲನ ಡಿಜಿಟಲ್‌ ʼ ಗೆ ದೃಢಪಡಿಸಿವೆ.

“” ತಿಂಗಳಿಗೆ ಮೂರ್ನಾಲ್ಕು ರಾಸುಗಳನ್ನು ಹುಲಿ ಕಬಳಿಸುತ್ತಾ ಬಂದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ನೀಡಿಲ್ಲ. ರೈತರು ಆನೆ, ಕಡವೆ,ಜಿಂಕೆ, ಚಿರತೆ,ಕಾಡುಹಂದಿ,ಮುಳ್ಳುಹಂದಿ,ನವಿಲುಗಳೂ ಹೊಲಕ್ಕೆ ಬಂದು ನಾವು ಬೆಳೆದ ಕೃಷಿಯನ್ನು ನಾಶಪಡಿಸುತ್ತಿವೆ. ಲಕ್ಷಗಟ್ಟಲೆ ಬೆಳೆನಾಶವಾದರೂ ಅರಣ್ಯ ಇಲಾಖೆ ಕೇವಲ ಎರಡು, ಮೂರು ಸಾವಿರ ರೂಪಾಯಿ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತಿದೆ. ನಮಗೆ ಪರಿಹಾರಕ್ಕಿಂತಲೂ ವನ್ಯಪ್ರಾಣಿ ಜನವಸತಿಯತ್ತ ಬರದಂತೆ ತಡೆಗಟ್ಟಲಿʼʼ ಎಂದು ಕೃಷಿಕರು ಅಳಲು ತೋಡಿಕೊಂಡರು.

“” ಗ್ರಾಮಸ್ಥರು ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡುತ್ತಿರುವುದು ಹುಲಿದಾಳಿಗೆ ಕಾರಣವಾಗುತ್ತಿದೆ. ಕೆಲವು ರೈತರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದ್ದು ದಾಖಲೆ ಇಲ್ಲದ ಜಾಗದಲ್ಲಿ ಫಸಲು ನಷ್ಟವಾದರೆ ಪರಿಹಾರ ಅಸಾಧ್ಯ. ಈವರೆಗೆ ಸಾಧ್ಯವಾದಷ್ಟೂ ಶೀಘ್ರ ಪರಿಹಾರ ನೀಡಲಾಗಿದೆ. ಕೆಲವರಿಗೆ ಪರಿಹಾರ ವಿತರಣೆ ಪ್ರಗತಿಯಲ್ಲಿದೆ. ಸ್ವಾಮಿ ದಾಸಯ್ಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಿಸಲಾಗುವುದು. ಅವರ ಆಸ್ಪತ್ರೆ ಖರ್ಚನ್ನು ಅರಣ್ಯ ಇಲಾಖೆ ಭರಿಸಲಿದೆ.ʼʼ ಎಂದು ಆರ್‌ ಎಫ್‌ ಒ ಕೆ.ಆರ್.ನಾರಾಯಣ ಆಂದೋಲನ ಡಿಜಿಟಲ್‌ ಗೆ ಮಾಹಿತಿ ನೀಡಿದ್ದಾರೆ.

10 ಮಂದಿ ಅರಣ್ಯ ಸಿಬ್ಬಂದಿಯ ತಂಡ ಮಂಗಳವಾರದಿಂದಲೇ ಹುಲಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ. ಬುಧವಾರದಿಂದ ಹುಲಿಯ ಚಲನ ವಲನ ವೀಕ್ಷಣೆಗೆ ಡ್ರೋಣ್ ಬಳಸಿಕೊಳ್ಳಲಾಗುವುದು. ಹುಲಿಯನ್ನು ಸೆರೆ ಹಿಡಿಯಲು ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಅನುಮತಿ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

3 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

3 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

6 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

7 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

9 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

9 hours ago