ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ.
ರಾತ್ರಿ 11:30 ಸಮಯದಲ್ಲಿ ಚಿಲಕಹಳ್ಳಿ ಗ್ರಾಮದ ಬಳಿ ಹುಲಿಮರಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಅರಣ್ಯ ಇಲಾಖೆಗೆ ತಿಳಿದಿದೆ.
ಈ ಹಿನ್ನಲೆ ಮುಂಜಾನೆಯಿಂದಲೇ ಸಾಕಾನೆಗಳಾದ ಭೀಮಾ, ಮಹೇಂದ್ರ, ಸುಗ್ರೀವ ಆನೆಗಳ ಮೂಲಕ ಬಂಡಿಪುರ ಅರಣ್ಯ ವಲಯದ ಸಿ ಎಫ್ ಪ್ರಭಾಕರ್, ಎ ಸಿ ಎಫ್ ಪರಮೇಶ್ ಡಿ, ಆರ್ ಎಫ್ ಒ ರಾಮಾಂಜನೇಯಲು, ಡಿ ಆರ್ ಎಫ್ ಓ ಕಾರ್ತಿಕ್, ರಘುನಾಥ್ ಡಿ ಗೌಡ, ಪಶು ವೈದ್ಯ ವಶೀಮ್ ಮಿರ್ಜಾ, ಶಾರ್ಫ್ ಶೂಟರ್ ಅಕ್ರಮ್, ವಾಹನ ಚಾಲಕ ಮುಬಾರಕ್ ಸೇರಿದಂತೆ 30ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿಲಕಹಳ್ಳಿ ಸುತ್ತಮುತ್ತಲಿನ ಸುಮಾರು ಆರು ಕಿಲೋ ಮೀಟರ್ ವ್ಯಾಪ್ತಿಯ ರೈತರ ಜಮೀನಿನ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ.
ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾದಲ್ಲಿ ಸುಮಾರು ಒಂದುವರೆ ವರ್ಷದ ಹುಲಿ ಮರಿ ಪತ್ತೆಯಾಗಿದೆ. ಕಾರ್ಯಚರಣೆ ಸಂದರ್ಭದಲ್ಲಿ ಸಾರ್ವಜನಿಕರಿಂದ ತೊಂದರೆಯಾಗದಂತೆ ಹುಲ್ಲಹಳ್ಳಿ ಠಾಣೆಯ ಪೊಲೀಸರು ಹಾಗೂ ಮೈಸೂರಿನ ಮೀಸಲು ಪಡೆ ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮುಂಜಾನೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಹುಲಿಮರಿ ಕಾಣಿಸಿ ಕೊಂಡಿದ್ದಾದರೂ ಜಮೀನಿನ ಭಾಗಗಳಲ್ಲಿ ಸಾಕಷ್ಟು ಪೊದೆಗಳು ಬೆಳೆದು ನಿಂತಿರುವ ಕಾರಣ ಸೆರೆ ಹಿಡಿಯಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 4 ರ ನಂತರ ಮತ್ತೆ ಕಾರ್ಯಾಚರಣೆ ಮುಂದುವರೆಯಲಿದ್ದು ಹುಲಿ ಮರಿಯನ್ನು ಸೆರೆ ಹಿಡಿಯುವ ಆತ್ಮವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…