ಮೈಸೂರು

ಹೆಡಿಯಾಲ ಸಮೀಪ ಹುಲಿ ಓಡಾಟ ; ಸಾಕಾನೆ ಮೂಲಕ ಕೂಂಬಿಂಗ್‌

ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ.

ರಾತ್ರಿ 11:30 ಸಮಯದಲ್ಲಿ ಚಿಲಕಹಳ್ಳಿ ಗ್ರಾಮದ ಬಳಿ ಹುಲಿಮರಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಅರಣ್ಯ ಇಲಾಖೆಗೆ ತಿಳಿದಿದೆ.

ಈ ಹಿನ್ನಲೆ ಮುಂಜಾನೆಯಿಂದಲೇ ಸಾಕಾನೆಗಳಾದ ಭೀಮಾ, ಮಹೇಂದ್ರ, ಸುಗ್ರೀವ ಆನೆಗಳ ಮೂಲಕ ಬಂಡಿಪುರ ಅರಣ್ಯ ವಲಯದ ಸಿ ಎಫ್ ಪ್ರಭಾಕರ್, ಎ ಸಿ ಎಫ್ ಪರಮೇಶ್ ಡಿ, ಆರ್ ಎಫ್ ಒ ರಾಮಾಂಜನೇಯಲು, ಡಿ ಆರ್ ಎಫ್ ಓ ಕಾರ್ತಿಕ್, ರಘುನಾಥ್ ಡಿ ಗೌಡ, ಪಶು ವೈದ್ಯ ವಶೀಮ್ ಮಿರ್ಜಾ, ಶಾರ್ಫ್ ಶೂಟರ್ ಅಕ್ರಮ್, ವಾಹನ ಚಾಲಕ ಮುಬಾರಕ್ ಸೇರಿದಂತೆ 30ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿಲಕಹಳ್ಳಿ ಸುತ್ತಮುತ್ತಲಿನ ಸುಮಾರು ಆರು ಕಿಲೋ ಮೀಟರ್ ವ್ಯಾಪ್ತಿಯ ರೈತರ ಜಮೀನಿನ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ.

ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾದಲ್ಲಿ ಸುಮಾರು ಒಂದುವರೆ ವರ್ಷದ ಹುಲಿ ಮರಿ ಪತ್ತೆಯಾಗಿದೆ. ಕಾರ್ಯಚರಣೆ ಸಂದರ್ಭದಲ್ಲಿ ಸಾರ್ವಜನಿಕರಿಂದ ತೊಂದರೆಯಾಗದಂತೆ ಹುಲ್ಲಹಳ್ಳಿ ಠಾಣೆಯ ಪೊಲೀಸರು ಹಾಗೂ ಮೈಸೂರಿನ ಮೀಸಲು ಪಡೆ ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮುಂಜಾನೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಹುಲಿಮರಿ ಕಾಣಿಸಿ ಕೊಂಡಿದ್ದಾದರೂ ಜಮೀನಿನ ಭಾಗಗಳಲ್ಲಿ ಸಾಕಷ್ಟು ಪೊದೆಗಳು ಬೆಳೆದು ನಿಂತಿರುವ ಕಾರಣ ಸೆರೆ ಹಿಡಿಯಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 4 ರ ನಂತರ ಮತ್ತೆ ಕಾರ್ಯಾಚರಣೆ ಮುಂದುವರೆಯಲಿದ್ದು ಹುಲಿ ಮರಿಯನ್ನು ಸೆರೆ ಹಿಡಿಯುವ ಆತ್ಮವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago