ಮೈಸೂರು

ಹೆಡತಲೆ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಬೆಚ್ಚಿ ಬಿದ್ದ ಶಿಕ್ಷಕಿ

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, ಬಸವಟ್ಟಿಗೆ ಗ್ರಾಮದ ಮೂಲಕ ಹೆಡತಲೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಗ್ರಾಮದ ತುಸು ದೂರದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹುಲಿ ಅಡ್ಡಲಾಗಿ ಬಂದ ಪರಿಣಾಮ ಬೆಚ್ಚಿ ಬಿದ್ದಿದ್ದಾರೆ.

ತಕ್ಷಣವೇ ರೈತ ಸಂಘದವರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ, ಪಿಡಿಒ ರಾಜಶೇಖರ್ ಬೇವಿನಹಳ್ಳಿ ಗ್ರಾಮದಲ್ಲಿ ಟಾಮ್‌ಟಾಮ್ ಹಾಕಿಸಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಂಜನಗೂಡಿನ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ಹಾಗೂ ಉಪ ವಲಯ ಅರಣ್ಯ ಅಧಿಕಾರಿ ಸತೀಶ್ ಮತ್ತು ಹತ್ತಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಚರಣೆ ನಡೆಸಿದ್ದಾರೆ. ಹುಲಿ ಕಾಣಿಸಿಕೊಂಡಿರುವ ಸ್ಥಳದಲ್ಲಿ ಏಳು ಕ್ಯಾಮೆರಾಗಳನ್ನು ಅಳವಡಿಸಿ ಹುಲಿ ಚಲನವಲನದ ಬಗ್ಗೆ ನಿಗಾ ವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago