ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ. ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.
ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…
ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…