ಮೈಸೂರು

ಮೈಸೂರು-ನಂಜನಗೂಡು ಸುತ್ತಾಮುತ್ತ ಹುಲಿ ಪ್ರತ್ಯಕ್ಷ

ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ.  ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.

ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.

andolanait

Recent Posts

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

52 mins ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

3 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

6 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

6 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

8 hours ago