ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ ಭಯದ ವಾತಾವರಣ ಸೃಷ್ಟಿಯಾಗಿತ್ತು.
ಗ್ರಾಮದ ಬಳ್ಳೂರು ಕಟ್ಟೆ ಬಳಿ ಗುರುವಾರ ಮಧ್ಯಾಹ್ನ ಜಮೀನಿನನ ಕೆಲಸ ಮಾಡುತ್ತಿದ್ದಾಗ ಹಠಾತ್ ಹುಲಿ ದರ್ಶನವಾಗಿದೆ. ಇದರಿಂದ ಬೆಚ್ಚಿ ಬಿದ್ದ ಕೃಷಿ ಕೆಲಸಗಾರರು ಗ್ರಾಮದತ್ತ ದೌಡಾಯಿಸಿದರು.
ಬೆಚ್ಚಿಬಿದ್ದ ಜನ
ಓಡುತ್ತಿದ್ದ ಜನರನ್ನು ಕಂಡ ಹುಲಿ ಬೆನ್ನಟ್ಟಿ ಬಂದಾಗ ಮತ್ತೆ ಭಯಬೀತರಾದ ಜನರು ವೇಗವಾಗಿ ಗ್ರಾಮದತ್ತ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನೂ ಕೆಲ ವರ್ಷಗಳ ಹಿಂದೆ ಹುಲಿಯೊಂದು ಇದೇ ಗ್ರಾಮದ ಸ್ವಾಮಿ ಎಂಬವರರನ್ನು ಬಲಿ ಪಡೆದಿತ್ತು. ಜತೆಗೆ ಈ ವರ್ಷದ ಆರಂಭದಲ್ಲಿ ರತ್ನಮ್ಮ ಎಂಬವರ ಮೇಲೂ ಹುಲಿ ದಾಳಿ ಮಾಡಿ ಆತಂಕ ಸೃಷ್ಟಿಸಿತ್ತು. ಬಳಿಕ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿದು ಕಾಡಿಗಟ್ಟಿದ್ದರು. ಇದೀಗ ಈ ಘಟನೆಗಳು ಮಾಸುವ ಮುನ್ನವೇ ಮತ್ತೆ ಹುಲಿ ಕಾಣಿಸಿಕೊಂಡು, ಜನತೆಯನ್ನು ಭಯಬೀತರನ್ನಾಗಿ ಮಾಡಿದೆ. ಅಷ್ಟೇ ಅಲ್ಲದೇ ಗ್ರಾಮಸ್ಥರು ಜಾನುವಾರುಗಳನ್ನು ಜಮೀನಿಗೆ ಮೇಯಲು ಬಿಡಲಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ
ಹುಲಿ ಕಂಡ ತಕ್ಷಣ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಳ್ಳೂರು ಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಹುಲಿಯನ್ನು ಕಾಡಿನತ್ತ ಕಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…