ಮೈಸೂರು

ಹುಲಿ ಪ್ರತ್ಯಕ್ಷ: ಭಯಭೀತರಾಗಿ ಓಡಿದ ಬಳ್ಳೂರು ಹುಂಡಿ ಗ್ರಾಮಸ್ಥರು

ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ  ಭಯದ ವಾತಾವರಣ ಸೃಷ್ಟಿಯಾಗಿತ್ತು.

ಗ್ರಾಮದ ಬಳ್ಳೂರು ಕಟ್ಟೆ ಬಳಿ ಗುರುವಾರ ಮಧ್ಯಾಹ್ನ ಜಮೀನಿನನ ಕೆಲಸ ಮಾಡುತ್ತಿದ್ದಾಗ ಹಠಾತ್ ಹುಲಿ ದರ್ಶನವಾಗಿದೆ. ಇದರಿಂದ ಬೆಚ್ಚಿ ಬಿದ್ದ ಕೃಷಿ ಕೆಲಸಗಾರರು ಗ್ರಾಮದತ್ತ ದೌಡಾಯಿಸಿದರು.

ಬೆಚ್ಚಿಬಿದ್ದ ಜನ
ಓಡುತ್ತಿದ್ದ ಜನರನ್ನು ಕಂಡ ಹುಲಿ ಬೆನ್ನಟ್ಟಿ ಬಂದಾಗ ಮತ್ತೆ ಭಯಬೀತರಾದ ಜನರು ವೇಗವಾಗಿ ಗ್ರಾಮದತ್ತ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೂ ಕೆಲ ವರ್ಷಗಳ ಹಿಂದೆ ಹುಲಿಯೊಂದು ಇದೇ ಗ್ರಾಮದ ಸ್ವಾಮಿ ಎಂಬವರರನ್ನು ಬಲಿ ಪಡೆದಿತ್ತು. ಜತೆಗೆ ಈ ವರ್ಷದ ಆರಂಭದಲ್ಲಿ ರತ್ನಮ್ಮ ಎಂಬವರ ಮೇಲೂ ಹುಲಿ ದಾಳಿ ಮಾಡಿ ಆತಂಕ ಸೃಷ್ಟಿಸಿತ್ತು. ಬಳಿಕ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿದು ಕಾಡಿಗಟ್ಟಿದ್ದರು. ಇದೀಗ ಈ ಘಟನೆಗಳು ಮಾಸುವ ಮುನ್ನವೇ ಮತ್ತೆ ಹುಲಿ ಕಾಣಿಸಿಕೊಂಡು, ಜನತೆಯನ್ನು ಭಯಬೀತರನ್ನಾಗಿ ಮಾಡಿದೆ. ಅಷ್ಟೇ ಅಲ್ಲದೇ ಗ್ರಾಮಸ್ಥರು ಜಾನುವಾರುಗಳನ್ನು ಜಮೀನಿಗೆ ಮೇಯಲು ಬಿಡಲಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

ಹುಲಿ ಕಂಡ ತಕ್ಷಣ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ  ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಳ್ಳೂರು ಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿ ಹುಲಿಯನ್ನು ಕಾಡಿನತ್ತ ಕಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago